
ಬೆಂಗಳೂರು: ಚಾಕು ಇರಿತಕ್ಕೊಳಗಾಗಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮಲ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಆರೋಪಿಯು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ವಿಚಾರಣೆ ಬಳಿಕ ಅದನ್ನು ಲೋಕಾಯುಕ್ತರು ಮುಕ್ತಾಯಗೊಳಿಸಿದ್ದಾರೆ. ಅದರಿಂದ ಅಸಮಾಧಾನಗೊಂಡಿದ್ದ ಆರೋಪಿ ಚಾಕುವಿನೊಂದಿಗೆ ಬಂದು ಕೊಲೆಯತ್ನ ಮಾಡಿದ್ದಾನೆ, ಎಂದು ಸಿಎಂ ಹೇಳಿದ್ದಾರೆ.
ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚಿಸಿದ್ದೇನೆ, ಎಂದು ಸಿಎಂ ಹೇಳಿದ್ದಾರೆ.
ನ್ಯಾ. ವಿಶ್ವನಾಥ್ ಶೆಟ್ಟಿಯವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ, ಎಂದು ಸಿಎಂ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.