
ಮೈಸೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ತಮ್ಮ ಪುತ್ರರನ್ನು ಪರಿಚಯ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು, ಚುನಾವಣೆಗೆ ಸ್ಪರ್ಧಿಸಲು ಇಬ್ಬರಿಗೂ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಭಾನುವಾರ ಉಪಹಾರ ವೇಳೆ ರಾಹುಲ್ಗೆ ತಮ್ಮ ಮಕ್ಕಳಾದ ಡಾ.ಯತೀಂದ್ರ ಮತ್ತು ಸುನಿಲ್ ಬೋಸ್ ಅವರನ್ನು ಸಿದ್ದರಾಮಯ್ಯ ಮತ್ತು ಡಾ.ಎಚ್.ಸಿ. ಮಹದೇವಪ್ಪ ಪರಿಚಯಿಸಿದರು.
ವರುಣ ಕ್ಷೇತ್ರದಿಂದ ಡಾ.ಯತೀಂದ್ರ, ಟಿ.ನರಸೀಪುರ ಕ್ಷೇತ್ರದಿಂದ ಸುನಿಲ್ ಬೋಸ್ ಸ್ಪರ್ಧಿಸಲು ಅವಕಾಶ ನೀಡಿದಲ್ಲಿ ಇಬ್ಬರನ್ನೂ ಗೆಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಈ ವೇಳೆ ಹುಣಸೂರು ಶಾಸಕ ಎಚ್.ಪಿ. ಮಂಜುನಾಥ್ ಮಾತ್ರ ಇದ್ದರು. ಇತರೆ ಯಾವುದೇ ನಾಯಕರಿಲ್ಲದಿದ್ದಾಗ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರು ರಾಹುಲ್ಗಾಂಧಿ ಬಳಿ ಮಕ್ಕಳ ಟಿಕೆಟ್ ಬಗ್ಗೆ ಪ್ರಸ್ತಾಪಿಸಿರುವುದು ಗಮನಾರ್ಹ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.