
ಬೆಂಗಳೂರು(ಮೇ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ದಿನ 2 ಸಿನಿಮಾ ವೀಕ್ಷಿಸಿದ್ದಾರೆ. ತಮ್ಮ ಮೊಮ್ಮಗ ಆಸೆಪಟ್ಟ ಎಂಬ ಕಾರಣಕ್ಕಾಗಿ ರಾಜಮೌಳಿ ನಿರ್ದೇಶನದ ಬಾಹುಬಲಿ-2 ಮತ್ತು ಕನ್ನಡ ಸಿನಿಮಾವೊಂದನ್ನು ವೀಕ್ಷಿಸಿದ್ದಾರೆ.
ಒರಾಯನ್ ಮಾಲ್'ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರು ಒಳಗೊಂಡ 48 ಮಂದಿಯ ಜೊತೆ ಬಾಹುಬಲಿ-2 ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ. ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಆಪೂರ್ವ ಕಾಸರವಳ್ಳಿ ನಿರ್ದೇಶನದ 'ನಿರುತ್ತರ'ಸಿನಿಮಾ ನೋಡಿದ್ದಾರೆ.
ಮುಖ್ಯಮಂತ್ರಿಯವರಿಗಾಗಿಯೇ ಚಿತ್ರತಂಡ ಸ್ಟುಡಿಯೋದಲ್ಲಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಿತ್ತು. ಸಿಎಂ ಅವರೊಂದಿಗೆ ಗೃಹ ಸಚಿವ ಪರಮೇಶ್ವರ್,ಅವರ ಧರ್ಮ ಪತ್ನಿ ಹಾಗೂ ವಾರ್ತಾ ಸಚಿವ ರೋಷನ್ ಬೇಗ್ ಸಹ ಸಿನಿಮಾ ವೀಕ್ಷಿಸಿದರು. ಕೆಲವು ದಿನಗಳ ಹಿಂದಷ್ಟೆ ಪುನೀತ್ ರಾಜ್'ಕುಮಾರ್ ಅಭಿನಯದ 'ರಾಜಕುಮಾರ್' ಸಿನಿಮಾವನ್ನು ನೀಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರತಂಡವನ್ನು ಅಭಿನಂದಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.