
ನವದೆಹಲಿ (ಅ.26): ಬಿಜೆಪಿಯ ಕೆಲ ನಾಯಕರು, ಕಾರ್ಯಕರ್ತರು ತಾಜ್ಮಹಲ್ ಬಗ್ಗೆ ವಿವಾದ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಾಜ್ಮಹಲ್ಗೆ ಭೇಟಿ ನೀಡಿದ್ದಾರೆ.
ಈ ಮೂಲಕ ಜಗತ್ತಿನ ಏಳು ಅದ್ಬುತಗಳಲ್ಲಿ ಒಂದಾದ ತಾಜ್ಮಹಲ್ಗೆ ಭೇಟಿ ಕೊಟ್ಟ ಉತ್ತರ ಪ್ರದೇಶದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಲಕ್ನೋನಿಂದ ಆಗ್ರಾಕ್ಕೆ ಆಗಮಿಸಿದ ಸಿಎಂ ಯೋಗಿ ತಾಜ್ಮಹಲ್ ಪಶ್ಚಿಮ ದ್ವಾರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸ್ವಚ್ಛತಾ ಅಭಿಯಾನ ಕೈಗೊಂಡರು. 500ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಚ್ಛ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಸಿಎಂ ಯೋಗಿ ಪೊರಕೆ ಹಿಡಿದು ತಾಜ್ಮಹಲ್ ಆವರಣದಲ್ಲಿ ಕಸ ಗುಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.