
ಬೆಂಗಳೂರು : ಬಜೆಟ್ ಮಂಡನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜುಲೈ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆ.ಪಿ.ನಗರ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಜೆಟ್ ಮಂಡನೆಗೆ ಸಂಬಂಧಪಟ್ಟಂತೆ ರೂಪರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಲಾಗಿದೆ. ಅಲ್ಲದೇ, ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಸಭೆಗಳನ್ನು ಮಾಡಲಾಗಿದೆ. ಜುಲೈ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸ್ಥಾನದ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುತ್ತಿದೆ. ರಾಜಕೀಯ ಮಾಡಲು ಬೇರೆಯವರಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಐದು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿರಲಿದೆ. ಅಲ್ಲದೇ, ಕೆಲವು ಸಮಸ್ಯೆಗಳು ಇನ್ನೊಂದು ವಾರದಲ್ಲಿ ಬಗೆಹರಿಯಲಿವೆ. ಸರ್ಕಾರ ಪತನವಾಗಲಿದೆ ಎಂದು ಹಗಲುಗನಸು ಕಾಣುವವರು ಕಾಣುತ್ತಿರಲಿ ಎಂದು ಪ್ರತಿಪಕ್ಷ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.