ಟಿಪ್ಪು ಜಯಂತಿ ಆಚರಣೆಗೆ ಕರಾವಳಿ ಕ್ರೈಸ್ತರ ವಿರೋಧ

Published : Nov 05, 2016, 02:14 AM ISTUpdated : Apr 11, 2018, 12:56 PM IST
ಟಿಪ್ಪು ಜಯಂತಿ ಆಚರಣೆಗೆ ಕರಾವಳಿ ಕ್ರೈಸ್ತರ ವಿರೋಧ

ಸಾರಾಂಶ

ಟಿಪ್ಪು ಜಯಂತಿಯನ್ನು ನಾವು ವಿರೋಧಿಸ್ತೀವಿ ಅಂತಿದ್ದಾರೆ ಕರಾವಳಿ ಕ್ರಿಶ್ಚಿಯನ್ನರು. ಟಿಪ್ಪು ನಮ್ಮ ಸಮುದಾಯದವರನ್ನು ಕೊಂದು ಹಾಕಿದ್ದ ಕ್ರೂರಿ. ಹೀಗಾಗಿ ಟಿಪ್ಪು ಜಯಂತಿ ಆಚರಿಸಿದ್ರೆ, ನಾವು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡ್ತೀವಿ ಅಂತಿದ್ದಾರೆ ಕ್ರಿಶ್ಚಿಯನ್ನರು. ಅಷ್ಟಕ್ಕೂ ಟಿಪ್ಪು ಬಗ್ಗೆ ಕರಾವಳಿ ಕ್ರಿಶ್ಚಿಯನ್ನರಿಗೆ ಯಾಕೆ ಕೋಪ? ಇಲ್ಲಿದೆ ನೋಡಿ ಆ ಸ್ಟೋರಿ...

ಬೆಂಗಳೂರು(ನ. 05): ಟಿಪ್ಪು ಜಯಂತಿಗೆ ರಾಜ್ಯದ ಮೂಲೆ ಮೂಲೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ವಿರೋಧದ ನಡುವಲ್ಲೇ ಟಿಪ್ಪು ಜಯಂತಿಗೆ ಸಿದ್ಧತೆ ನಡೆಸ್ತಿದೆ ಸರ್ಕಾರ. ಆದ್ರೆ ಟಿಪ್ಪು ಜಯಂತಿ ಮಾಡಿದ್ರೆ ನಾವು ಸಹಿಸುವುದಿಲ್ಲ. ಆತ ನಮ್ಮ ಸಮುದಾಯವನ್ನು ಸರ್ವನಾಶ ಮಾಡಿದ್ದಾನೆ ಎಂದು ಕರಾವಳಿ ಕ್ರಿಶ್ಚಿಯನ್ನರು ಕಿಡಿಕಾರಿದ್ದಾರೆ. ಸುಮಾರು 60 ಸಾವಿರದಷ್ಟು ಕ್ರಿಶ್ಚಿಯನ್ನರನ್ನ ಟಿಪ್ಪು ಕೊಂದಿದ್ದಾನೆ ಎಂದು ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೋಸಾರಿಯೋ ಆರೋಪಿಸುತ್ತಾರೆ.

ಸರ್ಕಾರ ಟಿಪ್ಪು ಜಯಂತಿಯನ್ನ ಆಚರಿಸಿದ್ರೆ ಕರಾವಳಿ ಕ್ರಿಶ್ಚಿಯನ್ನರು ಪ್ರತಿಭಟನೆ ಮಾಡೋದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಛೇರಿ ಮುಂದೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸೋದಾಗಿ, ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೊಸಾರಿಯೋ ಕಿಡಿ ಕಾರಿದ್ದಾರೆ.

ಟಿಪ್ಪು ಹಿಂದೂ ವಿರೋಧಿ ಆಗಿದ್ದ ಅನ್ನೋ ಕಾರಣಕ್ಕೆ, ಹಿಂದೂ ಸಂಘಟನೆಗಳು ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ. ಇತ್ತ ಕ್ರಿಶ್ಚಿಯನ್ನರಿಗೂ ಟಿಪ್ಪು ಕಂಟಕವಾಗಿ ಕಾಡಿದ್ದು, ಕರಾವಳಿ ಕ್ರಿಶ್ಚಿಯನ್ನರೂ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ ಸರ್ಕಾರ ಮಾತ್ರ ವಿರೋಧಿಗಳ ಕೂಗಿಗೆ ಕಿವಿಗೊಡದೇ, ಟಿಪ್ಪು ಜಯಂತಿಗೆ ಸಿದ್ಧತೆ ನಡೆಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ