
ಬೆಂಗಳೂರು(ನ. 05): ಟಿಪ್ಪು ಜಯಂತಿಗೆ ರಾಜ್ಯದ ಮೂಲೆ ಮೂಲೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ವಿರೋಧದ ನಡುವಲ್ಲೇ ಟಿಪ್ಪು ಜಯಂತಿಗೆ ಸಿದ್ಧತೆ ನಡೆಸ್ತಿದೆ ಸರ್ಕಾರ. ಆದ್ರೆ ಟಿಪ್ಪು ಜಯಂತಿ ಮಾಡಿದ್ರೆ ನಾವು ಸಹಿಸುವುದಿಲ್ಲ. ಆತ ನಮ್ಮ ಸಮುದಾಯವನ್ನು ಸರ್ವನಾಶ ಮಾಡಿದ್ದಾನೆ ಎಂದು ಕರಾವಳಿ ಕ್ರಿಶ್ಚಿಯನ್ನರು ಕಿಡಿಕಾರಿದ್ದಾರೆ. ಸುಮಾರು 60 ಸಾವಿರದಷ್ಟು ಕ್ರಿಶ್ಚಿಯನ್ನರನ್ನ ಟಿಪ್ಪು ಕೊಂದಿದ್ದಾನೆ ಎಂದು ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೋಸಾರಿಯೋ ಆರೋಪಿಸುತ್ತಾರೆ.
ಸರ್ಕಾರ ಟಿಪ್ಪು ಜಯಂತಿಯನ್ನ ಆಚರಿಸಿದ್ರೆ ಕರಾವಳಿ ಕ್ರಿಶ್ಚಿಯನ್ನರು ಪ್ರತಿಭಟನೆ ಮಾಡೋದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಛೇರಿ ಮುಂದೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸೋದಾಗಿ, ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೊಸಾರಿಯೋ ಕಿಡಿ ಕಾರಿದ್ದಾರೆ.
ಟಿಪ್ಪು ಹಿಂದೂ ವಿರೋಧಿ ಆಗಿದ್ದ ಅನ್ನೋ ಕಾರಣಕ್ಕೆ, ಹಿಂದೂ ಸಂಘಟನೆಗಳು ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ. ಇತ್ತ ಕ್ರಿಶ್ಚಿಯನ್ನರಿಗೂ ಟಿಪ್ಪು ಕಂಟಕವಾಗಿ ಕಾಡಿದ್ದು, ಕರಾವಳಿ ಕ್ರಿಶ್ಚಿಯನ್ನರೂ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ ಸರ್ಕಾರ ಮಾತ್ರ ವಿರೋಧಿಗಳ ಕೂಗಿಗೆ ಕಿವಿಗೊಡದೇ, ಟಿಪ್ಪು ಜಯಂತಿಗೆ ಸಿದ್ಧತೆ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.