
ಬೆಂಗಳೂರು (ಮಾ. 29): ಸಿಎಂ ಪುತ್ರನಿಂದಲೇ ನೀತಿಸಂಹಿತೆ ಉಲ್ಲಂಘನೆಯಾಗಿದೆ. ದೇವಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಮಾಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಸಿಎಂ ಪುತ್ರ ಯತೀಂದ್ರ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಯತೀಂದ್ರ ಜನತಾ ನಗರದ ಶ್ರೀ ಶನೇಶ್ವರ ದೇವಾಲಯದಲ್ಲಿ ಪ್ರಚಾರ ನಡೆಸಿದ್ದಾರೆ. ಶಾಲಾ ಆವರಣ,ದೇವಾಲಯಗಳ ಆವರಣದಲ್ಲಿ ಪ್ರಚಾರ ನಡೆಸುವಂತಿಲ್ಲ ಎಂಬ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಯತೀಂದ್ರ ವಿರುದ್ದ ಆರೋಪ ಮಾಡಿದ್ದಾರೆ. ತಕ್ಷಣವೇ ಯತೀಂದ್ರ ವಿರುದ್ದ ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಚುನಾವಣಾ ಪ್ರಚಾರದ ಬಿಸಿ ಹೆಚ್ಚಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.