ಚುನಾವಣಾ ನೀತಿ ಸಂಹಿತೆ ಜಾರಿ: ಅಪಾರ ಪ್ರಮಾಣದ ಬಾಡೂಟ ವಶ

Published : Mar 27, 2018, 03:00 PM ISTUpdated : Apr 11, 2018, 12:43 PM IST
ಚುನಾವಣಾ ನೀತಿ ಸಂಹಿತೆ ಜಾರಿ: ಅಪಾರ ಪ್ರಮಾಣದ ಬಾಡೂಟ ವಶ

ಸಾರಾಂಶ

ಚುನಾವಣಾ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ  ಬೆನ್ನಲ್ಲೇ   ಉಲ್ಲಂಘನೆ ಆರೋಪ  ಕೇಳಿ ಬಂದಿದೆ.  ರಾಜ್ಯದ್ಲಲಿಯೇ ಮೊದಲ ಪ್ರಕರಣ ದಾಖಲಾಗಿದೆ. 

ಬೆಂಗಳೂರು (ಮಾ. 27): ಚುನಾವಣಾ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ  ಬೆನ್ನಲ್ಲೇ   ಉಲ್ಲಂಘನೆ ಆರೋಪ  ಕೇಳಿ ಬಂದಿದೆ.  ರಾಜ್ಯದಲ್ಲಿಯೇ ಮೊದಲ ಪ್ರಕರಣ ದಾಖಲಾಗಿದೆ. 

ಮುಖ್ಯಮಂತ್ರಿ ಆಗಮನಕ್ಕಾಗಿ ತಯಾರಿಸಿದ್ದ ಅಪಾರ ಪ್ರಮಾಣದ ಬಾಡೂಟವನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಪೊಲೀಸರು 500 ಕೆಜಿ ಕುರಿ ಮಾಂಸ,  500 ಕೆಜಿ ಕೋಳಿ ಮಾಂಸ ಸೇರಿ ಒಟ್ಟು ಒಂದು ಟನ್ ಮಾಂಸ ಜೊತೆಗೆ ಇತರೆ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. 

ಜೆಡಿಎಸ್  ಜಿಲ್ಲಾಧ್ಯಕ್ಷ ಕೆ.ವಿ. ನಾಗರಾಜ್ ಇಂದು ಮುಖ್ಯಮಂತ್ರಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಬೇಕಿತ್ತು.  ನೀತಿ ಸಂಹಿತೆ ಕಾರಣದಿಂದಾಗಿ  ಅಧಿಕೃತವಾಗಿ ಕಾಂಗ್ರೆಸ್ ಸೇರಲೂ ಸಾಧ್ಯವಾಗದ ಸ್ಥಿತಿ ಉಂಟಾಗಿದೆ.  ತಾಲೂಕಿನ ಕಣಜೇನಹಳ್ಳಿಯಲ್ಲಿ   ಬಾಡೂಟ ತಯಾರಿಸಲಾಗಿತ್ತು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!