ಸಿದ್ಧಾರ್ಥ್ ನಾಪತ್ತೆ : ಹುಟ್ಟೂರಲ್ಲಿ ಕಾಫಿ ಡೇ, ಕಂಪನಿಗಳ ವ್ಯವಹಾರ ಸ್ಥಗಿತ

Published : Jul 30, 2019, 10:58 AM IST
ಸಿದ್ಧಾರ್ಥ್ ನಾಪತ್ತೆ : ಹುಟ್ಟೂರಲ್ಲಿ ಕಾಫಿ ಡೇ, ಕಂಪನಿಗಳ ವ್ಯವಹಾರ ಸ್ಥಗಿತ

ಸಾರಾಂಶ

ಕಾಫಿ ಡೇ ಮಾಲಿಕ ಸಿದ್ಧಾರ್ಥ್ ನಾಪತ್ತೆ ಹಿನ್ನೆಲೆಯಲ್ಲಿ ವರ ಸ್ವಂತ ಹುಟ್ಟೂರಾದ ಚಿಕ್ಕಮಗಳೂರಿನ ಎಲ್ಲಾ ಕಾಫಿ ಡೇ ಹಾಗೂ ಅವರ ಒಡೆತನದ ಕಂಪನಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಚಿಕ್ಕಮಗಳೂರು [ಜು.30]: ಕಾಫಿ ಡೇ ಮಾಲಿಕ ಸಿದ್ಧಾರ್ಥ್ ನಾಪತ್ತೆ ಹಿನ್ನೆಲೆಯಲ್ಲಿ ಅವರ ತವರು ಜಿಲ್ಲೆಯಾದ ಚಿಕ್ಕಮಗಳೂರಿನ ಎಲ್ಲಾ ಕಾಫಿ ಡೇಗಳ ವ್ಯವಹಾರ ಸ್ಥಗಿತ ಮಾಡಲಾಗಿದೆ. 

ಮಂಗಳೂರಿಗೆ ತೆರಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ತಮ್ಮ ಮಾಲಿಕನ ನಾಪತ್ತೆ ಪ್ರಕರಣ ಕೆಲಸಗಾರರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. 

ಎಸ್. ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ? ಪತ್ರದಲ್ಲಿ ಮಹತ್ವದ ಮಾಹಿತಿ!

ಚಿಕ್ಕಮಗಳೂರಿನಲ್ಲಿರುವ ಎಬಿಸಿ ಕಂಪನಿ, ಸೇರಾಯ್ ರೆಸಾರ್ಟ್, ಅಂಬರ್ ವ್ಯಾಲಿ ಶಾಲೆ, ವಿಟಿಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ನೇತ್ರಾವತಿ ತಟದಲ್ಲಿ ಉದ್ಯಮಿ ಸಿದ್ಧಾರ್ಥ ನಿಗೂಢ ನಾಪತ್ತೆ: ಚಾಲಕ ಕೊಟ್ಟ ದೂರಿನಲ್ಲೇನಿದೆ?

ಕೆಲಸಕ್ಕೆ ಆಗಮಿಸಿದ ಸಾವಿರಾರು ಕಾರ್ಮಿಕರನ್ನು ಮಾಲಿಕ ನಾಪತ್ತೆ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿದೆ. ಅಲ್ಲದೇ ಈ ಕಂಪನಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಲ್ಲಿ ತೀವ್ರ ಆತಂಕ ಮನೆಮಾಡಿದ್ದು, ಮಾಲಿಕ ಮತ್ತೆ ಮರಳಿ ಬರಲಿ ಎಂದು ಪ್ರಾರ್ಥಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?