
ಬೆಂಗಳೂರು, [ಅ.28]: ಕೆಪಿಎಸ್ ಸಿ ಅಧ್ಯಕ್ಷ ಪಟ್ಟಕ್ಕಾಗಿ ಮತ್ತೆ ದೋಸ್ತಿ ಸರ್ಕಾರದಲ್ಲಿ ಜಟಾಪಟಿ ಶುರುವಾಗಿದೆ.
ಕೆಪಿಎಸ್ ಸಿ ಅಧ್ಯಕ್ಷ ಪಟ್ಟಕ್ಕಾಗಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ಆರಂಭವಾಗಿದ್ದು, ತಮ್ಮ ಬಳಗದವರನ್ನು ಅಧ್ಯಕ್ಷ ಮಾಡಬೇಕು ಎಂದು ಇಬ್ಬರ ನಡುವೆ ಶೀತಲ ಸಮರ ನಡೆದಿದೆ.
ಕೆಪಿಎಸ್ಸಿ ಅಧ್ಯಕ್ಷ ಶ್ಯಾಮ್ ಭಟ್ ಅವರ ಅವಧಿ ಡಿಸೆಂಬರ್ ನಲ್ಲಿ ಮುಕ್ತಾವಾಗಲಿದ್ದು, ನೂತನ ಅಧ್ಯಕ್ಷರ ನೇಮಕಕ್ಕಾಗಿ ಎಚ್ಡಿಕೆ-ಡಿಕೆಶಿ ನಡುವೆ ಪೈಪೋಟಿ ನಡೆದಿದೆ.
ಒಕ್ಕಲಿಗ ಅಭ್ಯರ್ಥಿ ರಘುನಂದನ್ ರಾಮಣ್ಣ ಅವರ ನೇಮಕಕ್ಕಾಗಿ ಡಿ.ಕೆ.ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಮತ್ತೊಂದೆಡೆ ಕರೀಗೌಡ ಪರ ಎಚ್ಡಿಕೆ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಎಚ್ಡಿಕೆ-ಡಿಕೆಶಿ ಒಪ್ಪಂದ ಮಾಡಿಕೊಂಡ್ರೆ ಈ ಬಾರಿ ಒಕ್ಕಲಿಗರಿಗೆ ಕೆಪಿಎಸ್ಸಿ ಅಧ್ಯಕ್ಷಗಿರಿ ಬಹುತೇಕ ಖಚಿತವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.