
ಬೆಂಗಳೂರು(ಆ.21): ಬೆಂಗಳೂರಿನ ಕಾಲೇಜೊಂದರಲ್ಲಿ 2 ವಿದ್ಯಾರ್ಥಿ ಗುಂಪುಗಳ ನಡುವೆ ಹುಡುಗಿಯ ವಿಚಾರಕ್ಕೆ ಗ್ಯಾಂಗ್'ವಾರ್ ನಡೆದಿದೆ.
ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿರುವ ಆರ್ ಸಿ ಕಾಲೇಜಲ್ಲಿ ನಡೆದ ಗಲಾಟೆಗೆ ಒಬ್ಬ ವಿದ್ಯಾರ್ಥಿ ಹಲ್ಲೆಗೀಡಾಗಿದ್ದಾನೆ. ಹುಡುಗಿಯ ವಿಚಾರವಾಗಿ ಕಲಾ ಕಾಲೇಜಿನ ಐವರು ಹುಡುಗರು ಆರ್ ಸಿ ಕಾಲೇಜಿನ ಕ್ಯಾಂಪಸ್ ಒಳಗೆ ಬಂದಿದ್ದಾರೆ. ಈ ವೇಳೆ ಆರ್'ಸಿ ಕಾಲೇಜಿನ ಹುಡುಗರ ನಡುವೆ ಮಾತಿಗೆ ಮಾತು ಬೆಳೆದು ಎರಡೂ ಕಾಲೇಜಿನ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಕಲಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಸ್ಥಳಕ್ಕೆ ಬಂದ ಹೈ ಗ್ರೌಂಡ್ಸ್ ಪೊಲೀಸರು ಗಲಾಟೆಯಲ್ಲಿ ತೊಡಗಿದ್ದ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.