
ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೊರವಿನಕೊಪ್ಪ ಗ್ರಾಮದ ಮಂಜುನಾಥ ಏಣಗಿ (26) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆಯಲ್ಲೇ ಸೆಲ್ಫೀ ವಿಡಿಯೋ ಮಾಡಿಕೊಂಡು, ನಂತರ ವಿಷ ಸೇವಿಸಿ ಮೃತಪಟ್ಟಿದ್ದಾನೆ.
ಈ ಯುವಕ ಅದೇ ಗ್ರಾಮದ ಯುವತಿಯನ್ನ ಪ್ರೀತಿಸುತ್ತಿದ್ದ. ಇಬ್ಬರ ಮನೆಗೂ ಈ ವಿಚಾರ ಗೊತ್ತಿತ್ತು. ಪ್ರೀತಿಸುತ್ತಿದ್ದ ಯುವತಿಯನ್ನು ಬಿಡುವಂತೆ ಹಾಗೂ 10 ಲಕ್ಷ ರೂ.ಗೆ ಹಣ ನೀಡದಿದ್ರೆ, ಊರಿನಲ್ಲಿ ಮಾನ ಹರಾಜು ಹಾಕುವಂತೆ ಬೆದರಿಕೆ ಹಾಕಲಾಗಿತ್ತು. ಇದಕ್ಕೆ ಹೆದರಿ ಈಗಾಗಲೇ ಏಳು ಲಕ್ಷ ಹಣ ನೀಡಿದ್ದ ಯುವಕ. ಮತ್ತೆ 3 ಲಕ್ಷ ರೂ. ಹಣ ನೀಡುವಂತೆ ಪೀಡಿಸಿದ ಹಿನ್ನೆಲೆಯಲ್ಲಿ ಮನ ನೊಂದಿದ್ದಾನೆ.
ಯುವತಿ ಮನೆಯವರ ಕಿರುಕುಳ ಹಾಗೂ ತನಗಾಗಿರುವ ಅನ್ಯಾಯದ ಕುರಿತು ಹತ್ತು ನಿಮಿಷಗಳ ಸೆಲ್ಫೀ ವಿಡಿಯೋ ಮಾಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿ ಮನೆಯವರು ಪರಾರಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ