
ನವದೆಹಲಿ (ಸೆ.18): ಆಪ್ ಸರ್ಕಾರ, ಸುಪ್ರೀಂಕೋರ್ಟ್ ನಿರ್ದೇಶನ ಉಲ್ಲಂಘಿಸಿ ಜಾಹೀರಾತಿಗೆ ಬೊಕ್ಕಸದ ಹಣ ದುರ್ಬಳಕ್ಕೆ ಮಾಡಿಕೊಂಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೇಮಿಸಿರುವ ಸಮಿತಿ ದೋಷಾರೋಪ ಮಾಡಿದೆ.
ದುರ್ಬಳಕೆ ಮಾಡಿಕೊಂಡಿರುವ ಹಣವನ್ನು ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವೇ ತುಂಬಿಕೊಡಬೇಕು. ಜತೆಗೆ ಜಾಹೀರಾತಿಗೆ ಮಾಡಿರುವ ವೆಚ್ಚವನ್ನು ದೆಹಲಿ ಸರ್ಕಾರವೇ ಅಂದಾಜಿಸಬೇಕು ಎಂದು ಮಾಜಿ ಮುಖ್ಯ ಚುನಾವಣಾಧಿಕಾರಿ ಬಿಬಿ ಟಂಡನ್ ಅವರನ್ನು ಒಳಗೊಂಡ ಮೂವರ ಸದಸ್ಯರ ಸಮಿತಿ ಸೂಚಿಸಿದೆ.
ಈ ವಿಷಯದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಮಾರ್ಗದರ್ಶನದ 9 ಅಂಶಗಳ ಪೈಕಿ 6 ಅಂಶಗಳನ್ನು ದೆಹಲಿ ಸರ್ಕಾರ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ನಾಯಕ ಅಜಯ್ ಮಾಕನ್ ದೂರಿದ್ದರು ಎಂದು ಸಮಿತಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.