
ಬೆಂಗಳೂರು(ಆ.17): ಬಿಜೆಪಿ ಹಮ್ಮಿಕೊಳ್ಳುವ ರಾಜ್ಯಾದ್ಯಂತ ಪ್ರತಿಭಟನೆಗೆ ಪ್ರತ್ಯುತ್ತರವಾಗಿ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಲು ಹೊಸ ಅಸ್ತ್ರ ಬಳಸಲು ತಯಾರಾಗಿದೆ.
ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಬಿಬಿಎಂಪಿ ಆಳ್ವಿಕೆಯಲ್ಲಾದ ಹಗರಣಗಳನ್ನು ಬೇಧಿಸಲು ರಾಜ್ಯಸರ್ಕಾರ ಹೊಸ ತಂಡ ರಚಿಸಿದೆ. ಹೈಕಮಾಂಡ್ ಸೂಚನೆ ಮೇರೆಗೆ ನೂತನ ತಂಡದ ಜವಾಬ್ದಾರಿಯನ್ನು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಗಿದೆ. ಈ ತಂಡದಲ್ಲಿ ಸಾಮಾಜಿಕ ಹಾಗೂ ಆರ್'ಟಿಐ ಕಾರ್ಯಕರ್ತರು ಇರಲಿದ್ದಾರೆ.
ಬಿಬಿಎಂಪಿ ಹಗರಣ, ಶೋಭಾ ಕರಂದ್ಲಾಜೆ ಇಂಧನ ಸಚಿವರಾಗಿದ್ದಾಗ ನಡೆದ ಹಗರಣ, ಎಸ್.ಆರ್. ವಿಶ್ವನಾಥ್, ನಂದೀಶ್ ರೆಡ್ಡಿ ಹಾಗೂ ಬಿಎಸ್'ವೈ ಭೂಹಗರಣಗಳ ಬಗ್ಗೆ ಹೋರಾಟ ನಡೆಸಲಿದ್ದು, ಕಾರ್ಯಕರ್ತರ ತಂಡ ಕಾಂಗ್ರೆಸ್'ಗೆ ನೆರವು ನೀಡಲಿದೆ.
ರಾಜ್ಯ ಬಿಜೆಪಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಐಟಿ ದಾಳಿಯ ಹಿನ್ನಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ನಾಳೆ ಬಿಎಸ್'ವೈ ನೇತೃತ್ವದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆಗೆ ಮುಂದಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.