'ಮನೆ ಕೊಡ್ತೇವೆ 'ಆಕ್ರೋಶ್ ದಿವಸ್' ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ': ಹಣ ಕೊಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರಾ ಕಾಂಗ್ರೆಸಿಗರು?

Published : Nov 28, 2016, 08:49 AM ISTUpdated : Apr 11, 2018, 12:53 PM IST
'ಮನೆ ಕೊಡ್ತೇವೆ 'ಆಕ್ರೋಶ್ ದಿವಸ್' ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ': ಹಣ ಕೊಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರಾ ಕಾಂಗ್ರೆಸಿಗರು?

ಸಾರಾಂಶ

ನೋಟ್ ಬ್ಯಾನ್ ವಿರೋಧಿಸಿ ಕಾಂಗ್ರಸ್ ಪಕ್ಷ ದೇಶಾದ್ಯಂತ ಎಂದು ಆಕ್ರೋಶ್ ದಿವಸ್ ಆಚರಿಸುವಂತೆ ಕರೆ ನೀಡಿದೆ. ಇದರ ಅಂಗವಾಗಿ ಪ್ರತಿಭಟನೆಗಳನ್ನೂ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆಗೆ ಜನ ಬೆಂಬಲ ಸಿಗದಿರುವುದರಿಂದ ಗದಗ ಬೆಟಗೇರಿ ಅವಳಿ ನಗರದಲ್ಲಿ ಇಲ್ಲಿನ ಕಾಂಗ್ರೆಸ್ ಸದಸ್ಯರು ತಮ್ಮ ವಾರ್ಡ್'ನವರಿಗೆ ಮನೆ ಕೊಡುತ್ತೇವೆಂಬ ಆಮಿಷವೊಡ್ಡಿ ಪ್ರತಿಭಟನೆಗೆ ಕರೆ ತಂದಿದ್ದಾರೆ ಎಂಬುವುದು ಸುವರ್ಣ ನ್ಯೂಸ್ ನಡೆಸಿರುವ ರಹಸ್ಯ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಬೆಂಗಳೂರು(ನ.28): ನೋಟ್ ಬ್ಯಾನ್ ವಿರೋಧಿಸಿ ಕಾಂಗ್ರಸ್ ಪಕ್ಷ ದೇಶಾದ್ಯಂತ ಎಂದು ಆಕ್ರೋಶ್ ದಿವಸ್ ಆಚರಿಸುವಂತೆ ಕರೆ ನೀಡಿದೆ. ಇದರ ಅಂಗವಾಗಿ ಪ್ರತಿಭಟನೆಗಳನ್ನೂ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆಗೆ ಜನ ಬೆಂಬಲ ಸಿಗದಿರುವುದರಿಂದ ಗದಗ ಬೆಟಗೇರಿ ಅವಳಿ ನಗರದಲ್ಲಿ ಇಲ್ಲಿನ ಕಾಂಗ್ರೆಸ್ ಸದಸ್ಯರು ತಮ್ಮ ವಾರ್ಡ್'ನವರಿಗೆ ಮನೆ ಕೊಡುತ್ತೇವೆಂಬ ಆಮಿಷವೊಡ್ಡಿ ಪ್ರತಿಭಟನೆಗೆ ಕರೆ ತಂದಿದ್ದಾರೆ ಎಂಬುವುದು ಸುವರ್ಣ ನ್ಯೂಸ್ ನಡೆಸಿರುವ ರಹಸ್ಯ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಕೆಲವರಿಗೆ ತಾವ್ಯಾಕೆ ಪ್ರತಿಭಟನೆಗೆ ಬಂದಿದ್ದೇವೆ ಎಂಬ ವಿಚಾರವೇ ಗೊತ್ತಿರಲಿಲ್ಲವಾದರೆ, ಇನ್ನು ಕೆಲವರಿಗೆ 'ನಿಮಗೆ ಮನೆ ನೀಡುತ್ತೇವೆ' ಆಮಿಷವೊಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರೆ ತಂದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಬಳ್ಳಾರಿಯಲ್ಲೂ ಇಂತಹುದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಬಸವನ ಕುಂಟೆ ಮತ್ತು ಕೌಲ್ ಬಜಾರ್ ಪ್ರದೇಶ ಸೇರಿದಂತೆ ವಿವಿಧ ಸ್ಲಂಗಳಿಂದ ನೂರಾರು ಮಹಿಳೆಯರನ್ನು ಕಾಂಗ್ರೆಸ್ ಕಾರ್ಯಕರ್ತರು ಹಣ ನೀಡಿ ಪ್ರತಿಭಟನೆ ಕರೆ ತಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇಲ್ಲೂ ತಾವ್ಯಾಕೆ ಬಂದಿದ್ದೇವೆಂದು ಜನರಿಗೆ ತಿಳಿದಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೊದಲ ಕಾರಿನ ಮೇಲೆ ವಿಶೇಷ ಮೋಹ, ರೋಲ್ಸ್ ರಾಯ್ಸ್ ಕಾರಿದ್ರೂ ಹಳೆ ಮಾರುತಿ 800 ಮರುಖರೀದಿಸಿದ ಉದ್ಯಮಿ
ಹೊತ್ತಿ ಉರಿದ ಚಲಿಸುತ್ತಿದ್ದ ರೈಲಿನ ಬೋಗಿ, ಟಾಟಾ ನಗರ ಟ್ರೈನ್ ದುರಂತದಲ್ಲಿ ಬೆಂದು ಹೋದ ಪ್ರಯಾಣಿಕ