
ಮುಂಬೈ(ಆ.25): ದೇಶ ಎಷ್ಟೇ ಮುಂದುವರೆದರೂ, ಮಹಿಳೆಯರಿಗೆ ಸೂಕ್ತ ಗೌರವ ಕೊಡುವ ವಿಷಯದಲ್ಲಿ ಬಹಳ ಹಿಂದಿದೆ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ.
ಪ್ಲಾಟ್ಫಾರ್ಮ್ನಲ್ಲಿ ನಿಂತು ರೈಲಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ದುರುಳ ಪ್ರಯಾಣಿಕರು ಗುಟ್ಕಾ ಉಗಿದಿರುವ ಅಸಹ್ಯಕರ ಘಟನೆ ನಡೆದಿದೆ. ಮುಂಬೈನ ಬೋರಿವಲಿ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ದುರುಳರ ಗುಂಪೊಂದು ಗುಟ್ಕಾ ಉಗಿದು ದೌರ್ಜನ್ಯ ನಡೆಸಿದೆ.
ಸಂಜನಾ ರಾವ್ ಎಂಬ ಯುವತಿ ತನ್ನ ಸ್ನೇಹಿತೆಯೊಂದಿಗೆ ಬೋರಿವಲಿ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದಾಗ, ಇದೇ ಮಾರ್ಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಕೆಲವು ಪುಂಡರು ಗುಟಕಾ ಜಗಿಯುತ್ತಾ ಉದ್ದೇಶಪೂರ್ವಕವಾಗಿ ಆಕೆ ಮೇಲೆ ಉಗಿದಿದ್ದಾರೆ.
ಸದ್ಯ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ರೆಲ್ವೇ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.