
ಬೆಂಗಳೂರು: ಬುದ್ಧಿಜೀವಿಗಳ ಕುರಿತು ಅವಹೇಳನಕಾರಿ ಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಶುಕ್ರವಾರ ದೂರು ದಾಖಲಿಸಿದೆ.
ಈ ದೂರು ಸ್ವೀಕರಿಸಿದ ಪೊಲೀಸರು, ಕೃತ್ಯವು ವಿಜಯಪುರ ಪೊಲೀಸರ ವ್ಯಾಪ್ತಿಯಲ್ಲಿ ನಡೆದಿದ್ದು, ಈ ದೂರನ್ನು ಅಲ್ಲಿನ ಪೊಲೀಸರಿಗೆ ಮುಂದಿನ ತನಿಖೆ ವರ್ಗಾಯಿಸಲಾಗುತ್ತದೆ ಎಂದು ಹೇಳಿದ್ದಾರೆ.
‘ನಾನು ಗೃಹ ಸಚಿವನಾಗಿದ್ದರೆ ಬುದ್ಧಿಜೀವಿಗಳನ್ನು ಗುಂಡಿಕ್ಕಿ ಕೊಲ್ಲಿಸುತ್ತಿದ್ದೆ’ ಎಂಬ ವಿವಾದಾತ್ಮಕ ಹೇಳಿಕೆಯನ್ನು ಗುರುವಾರ ವಿಜಯ ಪುರದಲ್ಲಿ ಗುರುವಾರ ಯತ್ನಾಳ್ ಅವರು ನೀಡಿದ್ದರು ಎನ್ನಲಾಗಿದೆ. ಈ ಹೇಳಿಕೆ ಖಂಡಿಸಿರುವ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಅವರು, ಈ ರೀತಿ ಕೀಳು ಮಟ್ಟದ ಹೇಳಿಕೆ ನೀಡಿರುವ ಶಾಸಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.