ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧ ದೂರು

Published : May 12, 2019, 10:31 AM IST
ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧ  ದೂರು

ಸಾರಾಂಶ

ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಕಾರಣವೇನು?

ಆನೇಕಲ್‌ :  ರಾಜಕೀಯ ಒಳ ಆಟ ನಡೆಸಿ ಬೋವಿ ಜನಾಂಗವನ್ನು ಛಿದ್ರ ಛಿದ್ರಗೊಳಿಸುವ ದುರುದ್ದೇಶ ಹೊಂದಿರುವ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರು ಪದೇ ಪದೇ ವಡ್ಡ ಪದ ಬಳಕೆ ಮಾಡಿ, ತಮ್ಮಲ್ಲಿನ ಅನಾಗರಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಕರ್ನಾಟಕ ಭೋವಿ ಸಂಘರ್ಷ ಸುತಿಯ ಅಧ್ಯಕ್ಷ ಗೌತಮ್‌ ವೆಂಕಿ ಕಿಡಿ ಕಾರಿದ್ದಾರೆ.

ಅವರು ಆನೇಕಲ್‌ ತಾಲೂಕಿನ ಸೂರ್ಯ ನಗರ ಠಾಣೆಯಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡದ ಕಾಯ್ದೆಯಡಿ ಈಶ್ವರಪ್ಪನವರ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯಿಸಿ ಮಾತನಾಡಿ, ಧಾರವಾಡದ ಕುಂದಗೋಳದಲ್ಲಿ ಕೆಲ ದಿನಗಳ ಹಿಂದೆ ಸಾರ್ವಜನಿಕ ಸಭೆಯಲ್ಲಿ ಈಶ್ವರಪ್ಪ ನಮ್ಮ ವಿಬೋ ಜನಾಂಗವನ್ನು ವಡ್ಡ ಪದವನ್ನು ಅನೇಕ ಸಲ ಬಳಸಿ ಜನಾಂಗ ನಿಂದನೆ ಮಾಡಿದ್ದಾರೆ. ಅವರ ದೋಷಪೂರಿತ ಹೇಳಿಕೆಯಿಂದ ಜನಾಂಗ ಬಂಧುಗಳ ಮಾನಸಿಕ ಧಕ್ಕೆಗೆ ಕಾರಣರಾಗಿದೆ ಎಂದು ದೂರಿದ್ದಾರೆ.

ಹಾರಗದ್ದೆ ಗ್ರಾಮ ಪಂಚಾಯಿತಿ ಆಧ್ಯಕ್ಷ ಶ್ರೀನಿವಾಸ್‌, ಮುಖಂಡರಾದ ಜಿ.ಹರೀಶ್‌, ರಾಮಾಂಜಿನಪ್ಪ, ಕಟ್ಟಿಆನಂದ್‌, ಅಂಬರೀಶ್‌, ದೇವರಾಜ್‌ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ