ರೋಗಿಗಳ ಸಾವು: ರವೀಂದ್ರ, ವೀರಣ್ಣ ವಿರುದ್ಧ  ದೂರು

Published : Nov 19, 2017, 09:13 AM ISTUpdated : Apr 11, 2018, 12:38 PM IST
ರೋಗಿಗಳ ಸಾವು: ರವೀಂದ್ರ, ವೀರಣ್ಣ ವಿರುದ್ಧ  ದೂರು

ಸಾರಾಂಶ

ವೈದ್ಯರ ಮುಷ್ಕರದಿಂದ 51 ರೋಗಿಗಳು ಸಾವು | ವೀರಣ್ಣ, ರವೀಂದ್ರ ವಜಾಗೆ ಆಗ್ರಹ| ವೈದ್ಯ ಪರಿಷತ್‌ಗೆ ನ್ಯಾಯವಾದಿ ಶರ್ಮಾ ದೂರು

ಬೆಂಗಳೂರು: ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಿದ ಪರಿಣಾಮ 51 ಜನ ಸಾವಿಗೀಡಾಗಿದ್ದಾರೆ. ಹೀಗಾಗಿ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷ ಹಾಗೂ ಗೌರವ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಬೆಂಗಳೂರಿನ ವಕೀಲ ಎಸ್. ನಟರಾಜ್ ಶರ್ಮ ಅವರು ಕರ್ನಾಟಕ ವೈದ್ಯಕೀಯ ಪರಿಷತ್‌ಗೆ ದೂರು ನೀಡಿದ್ದಾರೆ.

‘ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿರುವ ಡಾ.ರವೀಂದ್ರ ಮತ್ತು ಗೌರವ ಕಾರ್ಯದರ್ಶಿ ಬಿ.ವೀರಣ್ಣ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು. 51 ಜನ ಸಾವಿಗೆ ಅವರನ್ನೇ ಸಂಪೂರ್ಣವಾಗಿ ಹೊಣೆಗಾರರನ್ನಾಗಿ ಮಾಡಬೇಕು. ಮುಷ್ಕರಿಂದ ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರ ಕುಟುಂಬ ವರ್ಗಕ್ಕೆ ಸೂಕ್ತ ಪರಿಹಾರ ಕೊಡಿಸಬೇಕು’ ಎಂದು ದೂರಿನಲ್ಲಿ ಕೋರಲಾಗಿದೆ.

ದೂರು ಸ್ವೀಕರಿಸಿದ ಕರ್ನಾಟಕ ವೈದ್ಯಕೀಯ ಪರಿಷತ್ತು ಅಧ್ಯಕ್ಷರ ಡಾ.ಎಚ್. ವೀರಭದ್ರಪ್ಪ ಅವರು ವೈದ್ಯರ ಮುಷ್ಕರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅದು ಸೋಮವಾರ ಮತ್ತೆ ಹೈಕೋರ್ಟ್‌ನಲ್ಲಿ ವಿಚಾರಣೆ ಬರಲಿದೆ. ಹೈಕೋರ್ಟ್ ತೀರ್ಮಾನವನ್ನು ನೋಡಿಕೊಂಡು ದೂರಿನ ಕುರಿತು ಮುಂದಿನ ಕ್ರಮ ಜರುಗಿಸಲಾಗುವುದು ಎಂಬುದಾಗಿ ತಮಗೆ ಭರವಸೆ ನೀಡಿದ್ದಾರೆ ಎಂದು ಶರ್ಮಾ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ