ಮೋದಿ ತಾಯಿ ಕುರಿತು ಕೀಳು ಹೇಳಿಕೆ: ಜಿಗ್ನೇಶ್ ಮೇವಾನಿ ವಿರುದ್ಧ ದೂರು

Published : Sep 14, 2017, 01:23 PM ISTUpdated : Apr 11, 2018, 12:46 PM IST
ಮೋದಿ ತಾಯಿ ಕುರಿತು ಕೀಳು ಹೇಳಿಕೆ: ಜಿಗ್ನೇಶ್ ಮೇವಾನಿ ವಿರುದ್ಧ ದೂರು

ಸಾರಾಂಶ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ನಡೆದ ‘ನಾನು ಗೌರಿ’ ಪ್ರತಿರೋಧ ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಬಗ್ಗೆ ಕೀಳು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಗುಜರಾತ್‌ನ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.

ಪುತ್ತೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ನಡೆದ ‘ನಾನು ಗೌರಿ’ ಪ್ರತಿರೋಧ ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಬಗ್ಗೆ ಕೀಳು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಗುಜರಾತ್‌ನ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.

ಗೌರಿ ಹತ್ಯೆಗೆ ಪ್ರಧಾನಿ ಮೋದಿ ಕಾರಣ ಎಂಬರ್ಥದಲ್ಲಿ ಜಿಗ್ನೇಶ್ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಮೋದಿ ತಾಯಿ ಬಗ್ಗೆ ಕೀಳಾಗಿ ಮಾತಾಡಿದ್ದಾರೆ. ಹೀಗಾಗಿ ಜಿಗ್ನೇಶ್ ಅವರನ್ನು ಬಂಧಿಸಿ ಸೂಕ್ತ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಂಬವರು ದೂರು ದಾಖಲಿಸಿದ್ದಾರೆ.

‘ಮೋದಿಯೊಬ್ಬ ನೀಚ ಮನಸ್ಸಿನ ನಾಯಕ. ಇಂತಹ ಮಗನಿಗೆ ಏಕೆ ಜನ್ಮ ನೀಡಿದ್ದೀರಿ ಎಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಬಳಿ ಪ್ರಶ್ನಿಸೋಣ’ ಎಂದು ಜಿಗ್ನೇಶ್ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?
ಸುರೇಶ್‌ ಕುಮಾರ್‌ ಸೈಕಲ್‌ ಸಾಹಸಕ್ಕೆ ಪ್ರಧಾನಿ ಮೋದಿ ಪ್ರಶಂಸೆ