
ಬೆಂಗಳೂರು : ಕಿರುತೆರೆ ನಟ ಕಿರಣ್ ರಾಜ್ ಮೇಲೆ ಮತ್ತೊಂದು ದೂರು ದಾಖಲು ಮಾಡಲಾಗಿದೆ. ಈ ಹಿಂದೆ ಕಿರುಕುಳ ನೀಡಿದ್ದಾನೆಂದು ದೂರು ನೀಡಿದ್ದ ಯಾಸ್ಮೀನ್ ಎಂಬಾಕೆಯಿಂದ ಮತ್ತೊಂದು ದೂರು ದಾಖಲಾಗಿದೆ.
ಫಿಲ್ಮ್ ಇಂಡಸ್ಟ್ರಿಯಲ್ಲಿ ಒಳ್ಳೆ ಅವಕಾಶ ಕೊಡಿಸುತ್ತೇನೆ ಎಂದು ಪಾಸ್ ಪೋರ್ಟ್ ಪಡೆದಿದ್ದ ಕಿರಣ್ ರಾಜ್, ಇದೀಗ ಆಕೆಯ ಪಾಸ್ ಪೋರ್ಟ್ ನೀಡದೆ ಆತನ ಕುಟುಂಬದೊಂದಿಗೆ ಸೇರಿ ಕಿರುಕುಳ ನೀಡುತ್ತಿರುವುದಾಗಿ ಆರೋಪ ಮಾಡಿದ್ದಾರೆ.
ಪಾಸ್ ಪೋರ್ಟ್ ವಾಪಸ್ ಕೇಳಿದ್ದಕ್ಕೆ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ. ವಿದೇಶಕ್ಕೆ ಚಿತ್ರೀಕರಣಕ್ಕೆಂದು ತೆರಳಲು ಪಾಸ್ ಪೋರ್ಟ್ ಕೇಳಿದ್ದು, ಕಿರಣ್ ರಾಜ್ ಪಾಸ್ ಪೋರ್ಟ್ ವಾಪಸ್ ನೀಡದ ಹಿನ್ನೆಲೆ ಕೆಲಸ ಕೈ ತಪ್ಪಿದೆ ಎಂದು ಯಾಸ್ಮಿನ್ ದೂರು ನೀಡಿದ್ದಾರೆ.
ಕಿರಣ್ ರಾಜ್ ವಿರುದ್ಧ 420,506,384 ಸೆಕ್ಷನ್ ನಡಿ ರಾಜರಾಜೇಶ್ವರಿ ನಗರದಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.