
ಬೆಂಗಳೂರು(ಡಿ.26): ರಾಘವೇಶ್ವರ ಶ್ರೀಗಳಿಗೆ ಜೀವ ಬೆದರಿಕೆ ಇದೆ ಎಂದು ರಾಮಚಂದ್ರಾಪುರ ಮಠದ ಭಕ್ತರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸತ್ಯಶೋಧ ಮಿತ್ರ ಮಂಡಳಿ ಹಾಗೂ ಕಾಂಗ್ರೆಸ್ ಮುಖಂಡ ಉಗ್ರಪ್ಪ ಪ್ರಚೋದನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳನ್ನು ಗುಂಡಿಕ್ಕಿ ಕೊಲ್ಲುವುದಾಗಿ ಸಂದೇಶ ರವಾನೆಯಾಗುತ್ತಿದೆ.
ರವಿಕುಮಾರ್, ಗುಂಡೂರಾವ್ ಎಂಬುವರಿಂದ ಸಂದೇಶ ರವಾನೆಯಾಗಿದ್ದು, ಇದರಿಂದ ಮಠದ ವರ್ಚಸ್ಸಿಗೆ ದಕ್ಕೆಯಾಗಿದೆ. ಮುಂದಿನ ದಿನಗಳಲ್ಲಿ ಶ್ರೀಗಳಿಗೆ ಅಥವಾ ಭಕ್ತರಿಗೆ ತೊಂದರೆಯಾದಲ್ಲಿ ಉಗ್ರಪ್ಪ ಮತ್ತು ಸತ್ಯಶೋಧ ಮಿತ್ರ ಮಂಡಳಿ ಕಾರಣ. ಸತ್ಯಶೋಧ ಮಿತ್ರ ಮಂಡಳಿ ಶ್ರೀಗಳ ವಿರುದ್ಧ ಜನರನ್ನು ಪ್ರಚೋದಿಸುತ್ತಿದೆ ಈ ಕಾರಣದಿಂದ ವಿ.ಎಸ್. ಉಗ್ರಪ್ಪ, ಶಾಂತಾರಾಮ ಹೆಗಡೆ, ರವಿಕುಮಾರ್, ಗುಂಡೂರಾವ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.