
ನವದೆಹಲಿ (ಏ.15): ಬ್ರಾಹ್ಮಣರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎನ್ನುವ ಆರೋಪದಡಿ ರಾಜಸ್ತಾನದ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವವ ಮೇಲೆ ಪ್ರಕರಣ ದಾಖಲಾಗಿದೆ.
ಯಾವುದೇ ಡಿಗ್ರಿಯಿಲ್ಲದೇ ಬ್ರಾಹ್ಮಣರು ತಮ್ಮ ಹೆಸರಿನ ಮುಂದೆ ಪಂಡಿತ್ ಅಂತ ಬಳಸುತ್ತಾರೆ ಎಂದು ಇತ್ತೀಚಿಗೆ ಸಮಾರಂಭವೊಂದರಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವ ವಾಸುದೇವ್ ದೇವನಾನಿ ಪ್ರಶ್ನಿಸಿದ್ದರು. ಸಚಿವರ ಈ ಹೇಳಿಕೆ ಬ್ರಾಹ್ಮಣರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಉಮಾಕಾಂತ್ ಓಜಾ ಆಪಾದಿಸಿ ಲಿಖಿತ ದೂರು ನೀಡಿದ್ದಾರೆ.
ಪೊಲೀಸರು ಸಚಿವರ ಮೇಲೆ ಎಫ್ ಐಆರ್ ದಾಖಲಿಸದೇ ಆರೊಪದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.