
ಬೆಂಗಳೂರು (ಮೇ.06): ಇದು ವಿಚಿತ್ರವಾದರೂ ಸತ್ಯ! ಇಲಿಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.
ಆಗಿದ್ದೇನು?
ಬೆಂಗಳೂರಿನ ಕೆಂಗೇರಿಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಯಿಂದ ಸೈರನ್ ಶಬ್ಧ ಕೇಳಿ ಗಾಬರಿಯಾದ ಸುತ್ತಮುತ್ತಲಿನ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಚೇರಿಯ ಭದ್ರತಾ ಕೊಠಡಿ ಪರಿಶೀಲನೆ ನಡೆಸಿದಾಗ ಇಲಿಯೊಂದು ಭದ್ರತಾ ಕಪಾಟಿಗೆ ಅಳವಡಿಸಿದ್ದ ವೈರ್ ಕಡಿದಿರುವುದು ಗಮನಕ್ಕೆ ಬಂದಿದೆ.
4 ತಿಂಗಳ ಹಿಂದೆ ಇದೇ ರೀತಿ ಸೈರನ್ ಸದ್ದು ಮಾಡಿದ್ದರಿಂದ ಜನರು ಬೇಸತ್ತಿದ್ದರು. ಈಗ ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಇಲಿಯ ವಿರುದ್ಧ ದೂರು ನೀಡಿದ್ದಾರಲ್ಲದೇ, ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.