ದೀಪಕ್ ರಾವ್ ಹತ್ಯೆಯಲ್ಲಿ ಬಿಜೆಪಿ ಕೈವಾಡ: ಎಚ್'ಡಿಕೆ ವಿರುದ್ಧ ದೂರು ದಾಖಲು

Published : Jan 09, 2018, 05:04 PM ISTUpdated : Apr 11, 2018, 01:05 PM IST
ದೀಪಕ್ ರಾವ್ ಹತ್ಯೆಯಲ್ಲಿ ಬಿಜೆಪಿ ಕೈವಾಡ: ಎಚ್'ಡಿಕೆ ವಿರುದ್ಧ ದೂರು ದಾಖಲು

ಸಾರಾಂಶ

ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ  ಕಾರ್ಪೊರೇಟರ್ ಕೈವಾಡ ಎಂದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ  ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು (ಜ.09): ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ  ಕಾರ್ಪೊರೇಟರ್ ಕೈವಾಡ ಎಂದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ  ವಿರುದ್ಧ ದೂರು ದಾಖಲಾಗಿದೆ.

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿದ್ದಾರೆ.

ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಎಂದು ನಿನ್ನೆ ಮೈಸೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಮಂಗಳೂರಿನಲ್ಲಿ ಬಿಜೆಪಿ ಉತ್ತರ ಕ್ಷೇತ್ರಾಧ್ಯಕ್ಷ ವೈ.ಭರತ್ ಶೆಟ್ಟಿ ಪತ್ರಿಕಾಗೋಷ್ಠಿ ನಡೆಸಿ,  ದೀಪಕ್ ಕೇಸ್'ನಲ್ಲಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ.  ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಅಂತ ಆರೋಪಿಸಿದ್ದಾರೆ.  ಹೀಗಾಗಿ ಬಿಜೆಪಿ ಇವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.  ಕುಮಾರಸ್ವಾಮಿ ವಿರುದ್ದ ಒಂದು ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ. ಇದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.  ಈ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಈ ಕೇಸನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?