
ಬೆಂಗಳೂರು(ಜೂ.20): ಜಾಹೀರಾತು ಶುಲ್ಕ ವಂಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹದಳದಲ್ಲಿ ದೂರು ದಾಖಲಾಗಿದೆ. ನಗರದ 439 ಬಿಬಿಎಂಪಿ ಬಸ್ ತಂಗುದಾಣದಲ್ಲಿ ಜಾಹೀರಾತು ಅಳವಡಿಕೆಯಲ್ಲಿ 68.15 ಕೋಟಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಕಳೆದ ಎರಡು ವರ್ಷಗಳಿಂದ 34.07 ಕೋಟಿ ರೂ. ನಂತೆ ರಾಜ್ಯ ಸರ್ಕಾರದ ಸಾಧನೆ ಹಾಗೂ ಯೋಜನೆಗಳನ್ನು ಬಸ್ ಶೆಲ್ಟರ್ ಗಳ ಮೂಲಕ ದುರ್ಬಳಕೆ ಮಾಡಿಕೊಂಡಿದೆ. ಬಸ್ ನಿಲ್ದಾಣದಲ್ಲಿ ಜಾಹೀರಾತು ಅಳವಡಿಕೆ ಮಾಡುವ ಮುನ್ನ ಬಿಬಿಎಂಪಿ ಕೌನ್ಸಿಲ್ ಸಭೆಯಿಂದ ಅನುಮತಿ ಪಡೆಯಬೇಕಿತ್ತು. ಯಾವುದೇ ಪರವಾನಿಗೆ ಪಡೆಯದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಸಾಧನೆ ಕುರಿತ ಜಾಹೀರಾತು ಬಸ್ ತಂಗುದಾಣದಲ್ಲಿ ಹಾಕಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲಿ ಸಿಎಂ ವಿರುದ್ಧ ದೂರು ದಾಖಲು ಮಾಡಿರುವುದಾಗಿ ಬಿಜೆಪಿ ಬೆಂಗಳೂರು ನಗರ ಜಿಲ್ಲಾ ಘಟಕದ ವಕ್ತಾರ ಎನ್ .ಆರ್ .ರಮೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಜಾಹೀರಾತು ಶುಲ್ಕ ವಸೂಲಿ ಮಾಡಲು ಪಾಲಿಕೆ ಆಯುಕ್ತರು ಮತ್ತು ಅಧಿಕಾರಿಗಳಿಗೆ ಧೈರ್ಯ ಮಾಡುತ್ತಿಲ್ಲ. ಈ ಸಂಬಂಧ ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ , ಸರ್ಕಾರದ ಮುಖ್ಯ ಕಾರ್ಯದರ್ಶಿ, ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಲೋಕಾಯುಕ್ತ ಮತ್ತು ಎಸಿಬಿಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.