ಸಿದ್ದರಾಮಯ್ಯ ವಿರುದ್ಧ ದೂರು

Published : Sep 17, 2017, 12:04 AM ISTUpdated : Apr 11, 2018, 01:10 PM IST
ಸಿದ್ದರಾಮಯ್ಯ ವಿರುದ್ಧ ದೂರು

ಸಾರಾಂಶ

ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂಬ ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಸಿಬ್ಬಂದಿ ನೇಮಕವಾಗಿರಬಹುದು, ಯಾವುದಾದರೂ ಕೆಲಸಗಳು ಆಗಬೇಕಾದರೂ ಸರ್ಕಾರಕ್ಕೆ ಲಂಚ ನೀಡಬೇಕು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು(ಸೆ.17): ಹಂಪಿ ವಿಶ್ವವಿದ್ಯಾಲಯ ಕುಲಪತಿ ಮಲ್ಲಿಕಾಘಂಟಿ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಚಿವರ ವಿರುದ್ಧ ಭ್ರಷ್ಟ್ರಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ.

ಕರ್ನಾಟಕ ಕಾರ್ಮಿಕ ವೇದಿಕೆ ಅಧ್ಯಕ್ಷ ಎಚ್.ಬಿ.ನಾಗೇಶ್ ಎಂಬುವವರು ಶನಿವಾರ ಎಸಿಬಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್ ಮತ್ತು ಬಸವರಾಜ ರಾಯರೆಡ್ಡಿ ವಿರುದ್ಧ ದೂರು ದಾಖಲಾಗಿದೆ.

ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂಬ ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಸಿಬ್ಬಂದಿ ನೇಮಕವಾಗಿರಬಹುದು, ಯಾವುದಾದರೂ ಕೆಲಸಗಳು ಆಗಬೇಕಾದರೂ ಸರ್ಕಾರಕ್ಕೆ ಲಂಚ ನೀಡಬೇಕು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಸೂಟ್‌ಕೇಸ್ ವಿಷಯ ಪ್ರಸ್ತಾಪಿಸಿದ್ದಾರೆ. ಇದು ಕೆಲಸಗಳಾಗಬೇಕಾದರೆ ಲಂಚ ಪಡೆದಿದ್ದಾರೆ ಎಂಬುದಕ್ಕೆ ನಿರ್ದಶನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಬ್ಬರು ಸಚಿವರ ಜತೆಗೆ ಮಲ್ಲಿಕಾ ಘಂಟಿ ವಿರುದ್ಧವೂ ತನಿಖೆಯಾಗಬೇಕು. ಯಾರಿಗೆ ಲಂಚ ನೀಡಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ತನಿಖೆ ಅಗತ್ಯ ಇದೆ ಎಂದು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ