
ಬೆಂಗಳೂರು(ಆ.19): ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ವಿರುದ್ಧ ವ್ಯಕ್ತಿಯೊಬ್ಬರು ಮಡಿವಾಳ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ. ಮಡಿವಾಳ ನಿವಾಸಿ ಹರಿನಾಥ್ ದೂರು ನೀಡಿದವರು. ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹರಿನಾಥ್ ಎಂಬುವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನು ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದೇನೆ. ಆ.15ರ ಬೆಳಗ್ಗೆ 4 ಗಂಟೆಗೆ ಸುಮಾರಿಗೆ ಮಡಿವಾಳ ಅಂಚೆ ಕಚೇರಿ ರಸ್ತೆ ನಿವಾಸಿ ನರೇಶ್ ಅವರು ಕರೆ ಮಾಡಿ, ಭಾರಿ ಮಳೆಯಿಂದಾಗಿ ತಮ್ಮ ಮನೆಗೆ ನೀರು ನುಗ್ಗಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಬಿಎಂಪಿಗೆ ಹಾಗೂ ಜಲಮಂಡಳಿಗೆ ತಿಳಿಸಿದ್ದರು ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಸ್ವತಃ ನಾನೇ ಸ್ಥಳಕ್ಕೆ ಹೋಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದೆ. ಈ ವೇಳೆ ಸ್ಥಳಕ್ಕೆ ಬಂದ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ನಮ್ಮ ಏರಿಯಾಗೆ ಏಕೆ ಬಂದಿದ್ದೀಯಾ? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರು ಎಂದು ಉಲ್ಲೇಖಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.