
ಲಖ್ನೋ: ತಮ್ಮ ಕಾರ್ಯವನ್ನು ಸರಿಯಾಗಿ ಮಾಡದ, 50 ವರ್ಷ ದಾಟಿದ ಸರ್ಕಾರಿ ಉದ್ಯೋಗಿಗಳಿಗೆ ಕಡ್ಡಾಯ ನಿವೃತ್ತಿ ನೀಡುವ ಕುರಿತು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಇದು ರಾಜ್ಯ ನೌಕರರ ತೀವ್ರ ವಿರೋಧಕ್ಕೆ ಕಾರಣವಾಗಿದೆ.
2018ರ ಮಾಚ್ರ್ 31ಕ್ಕೆ 50 ವರ್ಷ ಪೂರೈಸಿದ ಎಲ್ಲಾ ಅಧಿಕಾರಿಗಳನ್ನು ಆಯಾ ಇಲಾಖಾ ಮುಖ್ಯಸ್ಥರು ಜುಲೈ 31ರೊಳಗೆ ಪರಿಶೀಲನೆಗೆ ಒಳಪಡಿಸಬೇಕು. ಒಂದು ವೇಳೆ ಅವರು ತಮ್ಮ ಕೆಲಸವನ್ನು ಸೂಕ್ತವಾಗಿ ನಿರ್ವಹಿಸುತ್ತಿಲ್ಲ ಎಂದಾದಲ್ಲಿ ಈ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಬಳಿಕ ಅವರನ್ನು ಸೂಕ್ತ ಆದೇಶದ ಮೂಲಕ ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗುವುದು ಎಂದು ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಮುಕುಲ್ ಸಿಂಘಾಲ್ ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಲೆಕ್ಕಾಚಾರದ ಅನ್ವಯ ಉತ್ತರಪ್ರದೇಶದಲ್ಲಿ 50 ವರ್ಷ ಮೇಲ್ಪಟ್ಟನೌಕರರ ಸಂಖ್ಯೆ 4ಲಕ್ಷಕ್ಕೂ ಹೆಚ್ಚಿದೆ.
ಆದರೆ ಸರ್ಕಾರ ಆದೇಶವನ್ನು ರಾಜ್ಯ ನೌಕರರ ಸಂಘ ತೀವ್ರವಾಗಿ ವಿರೋಧಿಸಿದೆ. ಇಂಥ ಆದೇಶದ ಮೂಲಕ ಸರ್ಕಾರ ಉದ್ಯೋಗಿಗಳನ್ನು ಬೆದರಿಸಲು ಹೊರಟಿದೆ ಎಂದು ಅದು ಟೀಕಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.