ಹೈಕಮಾಂಡ್ ಬುಲಾವ್ : ದಿನೇಶ್ ಗುಂಡೂರಾವ್ ದೌಡು

Published : Sep 05, 2018, 05:42 PM ISTUpdated : Sep 09, 2018, 09:57 PM IST
ಹೈಕಮಾಂಡ್ ಬುಲಾವ್ : ದಿನೇಶ್ ಗುಂಡೂರಾವ್ ದೌಡು

ಸಾರಾಂಶ

ಮೈತ್ರಿ ಸರ್ಕಾರಕ್ಕೆ ಬೆದರಿಕೆಯೊಡ್ಡಿರುವ ರಮೇಶ್ ಜಾರಕಿಹೊಳಿ ನೇತೃತ್ವದ 12 ಶಾಸಕರು ಸಿದ್ದರಾಮಯ್ಯ ಬಣದ ಶಾಸಕರಾಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ ಎಂದು ಡಿಕೆಶಿ ಹೈಕಮಾಂಡಿಗೆ ದೂರಿದ್ದಾರೆ.

ಬೆಂಗಳೂರು[ಸೆ.05]: ರಾಜ್ಯ ಕಾಂಗ್ರೆಸಿನಲ್ಲಿ ಗರಿಗೆದರಿದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ಹೈಕಮಾಂಡ್  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ  ನಾಳೆ ದಿನೇಶ್ ಗುಂಡೂರಾವ್ ನವದೆಹಲಿಗೆ ಭೇಟಿ ನೀಡಲಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ಜೊತೆ ಸಭೆ ನಡೆಸಲಿದ್ದಾರೆ. ಇಂದು ರಾಜ್ಯ ಮೈತ್ರಿ ಸರ್ಕಾರದಲ್ಲಾಗುತ್ತಿರುವ ಬೆಳವಣಿಗೆ ಹಾಗೂ ಕಾಂಗ್ರೆಸ್ ಭಿನ್ನಚಟುವಟಿಗೆಗಳ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.  ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಮೈತ್ರಿ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ಆಗಿರುವ ಬಗ್ಗೆಯೂ ಹೈಕಮಾಂಡಿಗೆ ಡಿಕೆಶಿ ಮಾಹಿತಿ ರವಾನಿಸಿದ್ದಾರೆ.

ಮೈತ್ರಿ ಸರ್ಕಾರಕ್ಕೆ ಬೆದರಿಕೆಯೊಡ್ಡಿರುವ ರಮೇಶ್ ಜಾರಕಿಹೊಳಿ ನೇತೃತ್ವದ 12 ಶಾಸಕರು ಸಿದ್ದರಾಮಯ್ಯ ಬಣದ ಶಾಸಕರಾಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ ಎಂದು ಡಿಕೆಶಿ ಹೈಕಮಾಂಡಿಗೆ ದೂರಿದ್ದಾರೆ. ಇವೆಲ್ಲ ಬೆಳವಣಿಗೆಗಳ ಹಿನ್ನಲೆಯಲ್ಲಿ ಗುಂಡೂರಾವ್ ಅವರನ್ನು ಆಹ್ವಾನಿಸಿದ್ದು ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಲೋಕಸಭೆ ಚುನಾವಣಾ ತಯಾರಿ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ
ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು