ಮಿಡ್ ನೈಟ್ ಆಪರೇಷನ್ ನಡೆಸಿ ಡಿಕೆಶಿ ತಂತ್ರ : ಅತೃಪ್ತರಿಂದಲೂ ಪ್ರತಿತಂತ್ರ

Published : Jul 23, 2019, 11:48 AM ISTUpdated : Jul 23, 2019, 11:50 AM IST
ಮಿಡ್ ನೈಟ್ ಆಪರೇಷನ್ ನಡೆಸಿ ಡಿಕೆಶಿ ತಂತ್ರ  : ಅತೃಪ್ತರಿಂದಲೂ ಪ್ರತಿತಂತ್ರ

ಸಾರಾಂಶ

ರಾಜ್ಯ ರಾಜಕೀಯ ಪ್ರಹಸನಕ್ಕೆ ಅಂತ್ಯ ಹಾಡಲು ಇಂದು ಸಂಜೆ 6 ಗಂಟೆಗೆ ಡೆಡ್ ಲೈನ್ ನೀಡಲಾಗಿದೆ. ಈ ನಿಟ್ಟಿನಲ್ಲಿ ಟ್ರಬಲ್ ಶೂಟರ್ ಸಿಎಂ ಜೊತೆ ಸೇರಿ ಅಂತಿಮ ತಂತ್ರವಾಗಿ ಮಿಡ್ ನೈಟ್ ಆಪರೇಷನ್ ನಡೆಸಿದ್ದಾರೆ. 

ಬೆಂಗಳೂರು [ಜು.23] : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ಇಂದು ಸಂಜೆ 6 ಗಂಟೆಗೆ ವಿಶ್ವಾಸಮತಕ್ಕೆ ಡೆಡ್ ಲೈನ್ ನೀಡಲಾಗಿದೆ. 

ಈ ನಿಟ್ಟಿನಲ್ಲಿ ದೋಸ್ತಿ ಪಡೆ ಮಿಡ್ ನೈಟ್ ಆಪರೇಷನ್ ನಡೆಸಿದ್ದು, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಮ್ಮ ಯತ್ನ ಮುಂದುವರಿಸಿದ್ದು, ದೋಸ್ತಿ ನಾಯಕರೊಂದಿಗೆ ರಾತ್ರಿಪೂರ್ತಿ ಕಾರ್ಯಾಚರಣೆ ನಡೆಸಿದ್ದಾರೆ. 

ವಿಶ್ವಾಸ ಮತಕ್ಕೆ ಇಂದು ಡೆಡ್ ಲೈನ್ ನೀಡಿದ ಹಿನ್ನೆಲೆ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿ ಅತೃಪ್ತರ ಮನವೊಲಿಕೆಗೆ ರಾತ್ರಿ ಪೂರ್ತಿ ಯತ್ನಿಸಿದ್ದಾರೆ. 

ರಾತ್ರಿ ಅತೃಪ್ತರ ಕುಟುಂಬಸ್ಥರನ್ನು ಸಂಪರ್ಕಿಸಿದ ಡಿ.ಕೆ.ಶಿವಕುಮಾರ್ 6 ವರ್ಷಗಳ ಕಾಲ ಅನರ್ಹವಾಗುವ ಎಚ್ಚರಿಕೆ ನೀಡಿದ್ದಾರೆ.  ವಾಪಸ್ ಬರಲು ಮನವೊಲಿಸುವಂತೆಯೂ ಕುಟುಂಬಸ್ಥರ ಬಳಿ ಕೇಳಿಕೊಂಡರು. 

ಮಿಡ್ ನೈಟ್ ಆಪರೇಷನ್ ನಡೆಸುತ್ತಿರುವ ಮೈತ್ರಿ ನಾಯಕರು ತಮ್ಮ ಕುಟುಂಬಸ್ಥರನ್ನು ಸಂಪರ್ಕಿಸುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಅತೃಪ್ತರೆಲ್ಲಾ ಸ್ಪೀಕರ್ ಗೆ ಪತ್ರ ರವಾನಿಸಿದ್ದು,  ಭೇಟಿಯಾಗಲು ಸಮಯಾವಕಾಶ ಕೋರಿದ್ದಾರೆ.  ಈ ಮೂಲಕ ಮೈತ್ರಿ ನಾಯಕರು ಹೆಣೆಯುತ್ತಿರುವ ತಂತ್ರಗಳಿಗೆ ಪ್ರತಿತಂತ್ರ ಹೆಣೆಯುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್