ಶ್ರೀರಾಮನ – ಹಿಂದೂ ಧರ್ಮದ ಅಸ್ತಿತ್ವ ಪ್ರಶ್ನಿಸುವ ಕಾಂಗ್ರೆಸ್’ನವರು ಹೇಗೆ ಪಾಂಡವರಾಗುತ್ತಾರೆ..?

Published : Mar 19, 2018, 02:21 PM ISTUpdated : Apr 11, 2018, 01:03 PM IST
ಶ್ರೀರಾಮನ – ಹಿಂದೂ ಧರ್ಮದ ಅಸ್ತಿತ್ವ ಪ್ರಶ್ನಿಸುವ ಕಾಂಗ್ರೆಸ್’ನವರು ಹೇಗೆ ಪಾಂಡವರಾಗುತ್ತಾರೆ..?

ಸಾರಾಂಶ

ರಾಮನ ಇರುವಿನ ಹಾಗೂ ಹಿಂದೂ ಧರ್ಮದ ಅಸ್ತಿತ್ವವನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಈಗೇಕೆ ತಮ್ಮನ್ನು ಪಾಂಡವರು ಎಂದು ಕರೆದುಕೊಂಡಿದೆ ಎಂದು ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ : ರಾಮನ ಇರುವಿನ ಹಾಗೂ ಹಿಂದೂ ಧರ್ಮದ ಅಸ್ತಿತ್ವವನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಈಗೇಕೆ ತಮ್ಮನ್ನು ಪಾಂಡವರು ಎಂದು ಕರೆದುಕೊಂಡಿದೆ ಎಂದು ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಾಂಗ್ರೆಸ್ ನಡುವೆ ಇದೀಗ ಮಹಾಭಾರತದ ಜಗಳ ಮಿತಿ ಮೀರಿದ್ದು, ಪರಸ್ಪರ ವಾಗ್ವಾದಗಳು ಭುಗಿಲೇಳುತ್ತಲೇ ಇದೆ. ಇದೀಗ ಬಿಜೆಪಿಯವರು ಕೌರವರು, ಕಾಂಗ್ರೆಸ್’ನವರು ಪಾಂಡವರು ಎಂಬ ಹೇಳಿಕೆಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಪಕ್ಷ ಶ್ರೀ ರಾಮನ ಇರುವು ಹಿಂದೂ ಧರ್ಮದ ಆಚರಣೆಗಳ ಬಗ್ಗೆ ಪ್ರಶ್ನೆ ಮಾಡುತ್ತಿತ್ತೋ ಆ ಪಕ್ಷವೇ ಇದೀಗ ತಾವು ಪಾಂಡವರು ಕೌರವರು ಎಂಬ ಹೇಳಿಕೆ ನೀಡುತ್ತಿದೆ ಎಂದು  ಹೇಳಿದರು.

ಮಹಾಭಾರತದ ಕೌರವರಿಗೆ ಬಿಜೆಪಿ ಹಾಗೂ ಆರ್'ಎಸ್'ಎಸ್ ಹೋಲಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಶತಮಾನಗಳಿಂದಲೂ ಅಧಿಕಾರಕ್ಕಾಗಿ ಹೋರಾಟ ನಡೆಯುತ್ತಾ ಬಂದಿದೆ. ಕೌರವರು ಬಲಿಷ್ಠರು ಹಾಗೂ ಸೊಕ್ಕಿನಿಂದ ವರ್ತಿಸುತ್ತಿದ್ದರು, ಇದೇ ವೇಳೆ ಪಾಂಡವರು ವಿನಮ್ರರಾಗಿದ್ದರು ಹಾಗೂ ಸತ್ಯಕ್ಕಾಗಿ ಹೋರಾಡುತ್ತಿದ್ದರು ಎಂದು ಕಾಂಗ್ರೆಸ್ ಅಧಿವೇಶನದಲ್ಲಿ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: DCM ಡಿಕೆ ಶಿವಕುಮಾರ್
ಪಿಎಂ ಫಸಲ್ ಬಿಮಾ ಯೋಜನೆ ದೊಡ್ಡ ಗೋಲ್‌ಮಾಲ್‌: ಸಚಿವ ಈಶ್ವರ್ ಖಂಡ್ರೆ ಗಂಭೀರ ಆರೋಪ