ಮೈತ್ರಿ ಸರ್ಕಾರ ಉಳಿಸಲು ಕಾಂಗ್ರೆಸ್‌ 3 ಪ್ಲಾನ್‌

Published : Jul 07, 2019, 09:18 AM IST
ಮೈತ್ರಿ ಸರ್ಕಾರ ಉಳಿಸಲು ಕಾಂಗ್ರೆಸ್‌ 3 ಪ್ಲಾನ್‌

ಸಾರಾಂಶ

ಕರ್ನಾಟಕ ಮೈತ್ರಿ ಸರ್ಕಾರದಲ್ಲಿ ರಾಜೀನಾಮೆಯಿಂದ ಅಲ್ಲೋಲ ಕಲ್ಲೋಲ ಸ್ಥಿತಿ ನಿರ್ಮಾಣವಾಗುತ್ತಿದ್ದು, ಇದೀಗ ಕೈ ಮುಖಂಡರು ಸರ್ಕಾರ ಉಳಿಸಲು ಮೂರು ಯೋಜನೆ ರೂಪಿಸಿದೆ. 

ಬೆಂಗಳೂರು [ಜು.07]:  ಜು.12ರಿಂದ ಆರಂಭವಾಗಬೇಕಿದ್ದ ವಿಧಾನಮಂಡಲ ಅಧಿವೇಶನವನ್ನು ಮುಂದೂಡುವುದು, ಪಕ್ಷದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೋಮವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆಯೋಜಿಸುವುದು ಮತ್ತು ಅತೃಪ್ತ ಕಾಂಗ್ರೆಸ್ಸಿಗರ ರಾಜೀನಾಮೆ ಅಂಗೀಕಾರ ಮಾಡದಂತೆ ಸ್ಪೀಕರ್‌ ಅವರನ್ನು ಕೋರುವುದು.

ಪತನದ ಅಂಚಿನಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ತಕ್ಷಣಕ್ಕೆ ಕಾಂಗ್ರೆಸ್‌ ಕೈಗೊಳ್ಳಲು ಮುಂದಾಗಿರುವ ಕ್ರಮಗಳಿವು. ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ನಡೆದ ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಹೈಕಮಾಂಡ್‌ ಅಣತಿಯನ್ನು ಹೊತ್ತು ತಂದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ಶನಿವಾರ ಸಂಜೆ ಸರಣಿ ಸಭೆಗಳನ್ನು ನಡೆಸಿದರು. ಮೊದಲಿಗೆ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ ನಡೆಸಿದ ಅವರು ಈ ಸಭೆಯಲ್ಲಿ ಹಾಲಿ ಪರಿಸ್ಥಿತಿಗೆ ಕಾರಣಗಳನ್ನು ನಾಯಕರಿಂದ ಕೇಳಿ ತಿಳಿದುಕೊಂಡರು. ಅನಂತರ, ಖುದ್ದಾಗಿ ತೆರಳಿ ರಾಜೀನಾಮೆ ನೀಡಿರುವ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಹಾಗೂ ಅವರ ಪುತ್ರಿ ಸೌಮ್ಯ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದರು.

ಅನಂತರ ದೇವೇಗೌಡ ಅವರ ನಿವಾಸಕ್ಕೆ ತೆರಳಿದ ವೇಣುಗೋಪಾಲ್‌ ಅವರೊಂದಿಗೂ ಮಾತುಕತೆ ನಡೆಸಿದರು. ಇದಾದ ನಂತರ ಅಂತಿಮವಾಗಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್‌ ನಾಯಕರ ಸಭೆಯನ್ನು ಅವರು ಮತ್ತೊಮ್ಮೆ ನಡೆಸಿದರು.

ಈ ಸಭೆಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದು ಹೈಕಮಾಂಡ್‌ನ ಬಯಕೆ ಎಂಬುದನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಭೆಯು ವಿಧಾನಮಂಡಲ ಅಧಿವೇಶನವನ್ನು ಮುಂದೂಡುವ ಸಾಧ್ಯತೆಗಳನ್ನು ಪರಿಶೀಲಿಸಲು ತೀರ್ಮಾನಿಸಿತು. ವಿಧಾನಮಂಡಲ ಅಧಿವೇಶನ ನಡೆದರೆ ಆಗ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ಕಾರಣಕ್ಕೆ ಬಹುಮತ ಸಾಬೀತುಪಡಿಸುವ ಪರಿಸ್ಥಿತಿ ಉಂಟಾಗಬಹುದು. ಹೀಗಾಗಿ ಅಧಿವೇಶನವನ್ನು ಮುಂದೂಡಲು ಸಾಧ್ಯವೇ ಎಂಬುದನ್ನು ಮೊದಲು ಪರಿಶೀಲಿಸಬೇಕು.

ವಿಧಾನ ಮಂಡಲ ಅಧಿವೇಶನ ಮುಂದೂಡಲು ಸಾಧ್ಯವಾದರೆ, ಅತೃಪ್ತ ಶಾಸಕರ ರಾಜೀನಾಮೆ ಶೀಘ್ರ ಅಂಗೀಕಾರವಾಗದಂತೆ ತಡೆಯಲು ಯತ್ನಿಸಬಹುದು. ಈ ಬಗ್ಗೆ ಸ್ಪೀಕರ್‌ಗೆ ಅತೃಪ್ತರ ವಿರುದ್ಧ ದೂರು ನೀಡುವ ಮಾರ್ಗವನ್ನು ಅನುಸರಿಸಲು ತೀರ್ಮಾನಿಸಲಾಯಿತು ಎನ್ನಲಾಗಿದೆ.

ಇದಲ್ಲದೆ, ಕಾಂಗ್ರೆಸ್ಸಿನ ಮತ್ಯಾವ ಶಾಸಕರೂ ಅತೃಪ್ತರ ಗುಂಪು ಸೇರದಂತೆ ತಡೆಯಲು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತೀರ್ಮಾನಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಸಲು ಸಭೆ ಚಿಂತನೆ ನಡೆಸಿತು ಎಂದು ಮೂಲಗಳು ಹೇಳಿವೆ.

1. ವಿಧಾನಮಂಡಲ ಅಧಿವೇಶನ ಮುಂದೂಡುವುದು 2. ಇನ್ನಷ್ಟುರಾಜೀನಾಮೆ ತಡೆಯಲು ನಾಳೆ ಶಾಸಕಾಂಗ ಸಭೆ 3. ರಾಜೀನಾಮೆ ಅಂಗೀಕರಿಸದಂತೆ ಸ್ಪೀಕರ್‌ಗೆ ಮನವಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಸ್ಕ್‌, ಜೆಫ್‌ ಬೆಬೋಸ್‌, ಅಂಬಾನಿ ಇವರ್ಯಾರೂ ಅಲ್ಲ.. ಇದು ವಿಶ್ವದ ಅತ್ಯಂತ ಶ್ರೀಮಂತ ಕುಟುಂಬ, ಇವರಿಗಿದೆ ಫ್ಲಿಪ್‌ಕಾರ್ಟ್‌ ಲಿಂಕ್‌
ಮಹೇಶ್‌ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಬೆನ್ನಲ್ಲೇ ನಾಪತ್ತೆ! ಮೈಕ್ ಮೂಲಕ ಪ್ರಕಟಣೆ ಹೊರಡಿಸಿದ ಸರ್ಕಾರ!