
ನವದೆಹಲಿ(ಜು.03): ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಅಧ್ಯುಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನೀಡಿರುವ ರಾಜೀನಾಮೆಯನ್ನು ಕಾಂಗ್ರೆಸ್ ಸ್ವೀಕರಿಸುವ ಅನಿವಾರ್ಯತೆಗೆ ಸಿಲುಕಿದೆ. ಇನ್ನೊಂದು ವಾರದಲ್ಲಿ ಕಾಂಗ್ರೆಸ್ ತನ್ನ ಹೊಸ ಅಧ್ಯಕ್ಷರನ್ನು ಆರಿಸಲಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ರಾಜೀನಾಮೆ ನೀಡದಂತೆ ಪಕ್ಷ ನಿರಂತರವಾಗಿ ಒತ್ತಡ ಹೇರುತ್ತಲೇ ಇತ್ತು
ಆದರೂ ಪಟ್ಟು ಸಡಿಲಿಸದ ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಹುಲ್ ರಾಜೀನಾಮೆ ಸ್ವೀಕರಿಸುವ ನಿರ್ಧಾರಕ್ಕೆ ಕೈ ನಾಯಕರು ಬಂದಿದ್ದಾರೆ.
ಇನ್ನು ಒಂದು ವಾರದೊಳಗಾಗಿ ನೂತನ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದ್ದು, ಗಾಂಧಿ ಕುಟುಂಬಕ್ಕೆ ಹೊರತಾದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಆರಿಸುವ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.