’ಸೀರೆ’ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಕೈ ಕಟ್!

Published : Feb 23, 2018, 05:38 PM ISTUpdated : Apr 11, 2018, 12:35 PM IST
’ಸೀರೆ’ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಕೈ  ಕಟ್!

ಸಾರಾಂಶ

ಚುನಾವಣಾ ಹತ್ತಿರಕ್ಕೆ ಬರುತ್ತಿದ್ದಂತೆ ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ದ್ವೇಷಕ್ಕೆ ತಿರುಗುತ್ತಿದೆ. ಒಂದೆಡೆ  ಓರ್ವ ಕಾರ್ಯಕರ್ತನ ಕೈ ಕಟ್ ಆದರೆ  ಮತ್ತೊಂದೆಡೆ ಶಾಸಕರು ಕೊಟ್ಟ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಫೆ. 23): ಚುನಾವಣಾ ಹತ್ತಿರಕ್ಕೆ ಬರುತ್ತಿದ್ದಂತೆ ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ದ್ವೇಷಕ್ಕೆ ತಿರುಗುತ್ತಿದೆ. ಒಂದೆಡೆ  ಓರ್ವ ಕಾರ್ಯಕರ್ತನ ಕೈ ಕಟ್ ಆದರೆ  ಮತ್ತೊಂದೆಡೆ ಶಾಸಕರು ಕೊಟ್ಟ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನಪ್ರತಿನಿಧಿಗಳಿಗೆ ತಮ್ಮ ಕ್ಷೇತ್ರದ ಕಾಳಜಿ ಹೆಚ್ಚಾಗುತ್ತಿದೆ. ಮತದಾರರಿಗೆ ಸೀರೆ, ಹಣ , ಹೆಂಡ ಹಂಚುವುದು ಶುರುವಾಗಿದೆ. ಈ ವೇಳೆ  ಜೆಡಿಎಸ್​ ಹಾಗೂ ಕಾಂಗ್ರೆಸ್​  ಕಾರ್ಯಕರ್ತರ ಮಧ್ಯೆ  ಮಾತಿನ ಚಕಮಕಿ ನಡೆದಿದ್ದು, ಇಬ್ಬರ ಜಗಳ ತಾರಕ್ಕೇರಿ ಜೆಡಿಎಸ್ ಕಾರ್ಯಕರ್ತ ಲೋಕೇಶ್​  ಕೈ ಕತ್ತರಿಸಿದ್ದಾನೆ.  ಕೂಡಲೇ  ರವಿಯನ್ನು ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ  ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ  ಬೆಂಗಳೂರಿನ ಹಾಸ್​ ಮ್ಯಾಟ್​ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಈ ಸಂಬಂಧ ಮಂಚೇನ ಹಳ್ಳಿ  ಪೊಲೀಸ್​ ಠಾಣೆಯಲ್ಲಿ  ದೂರ ದಾಖಲಾಗಿದೆ. 
ಇದೆಲ್ಲಾ ಒಂದು‌ ಕಡೆ‌ ಆದರೆ ಮತ್ತೊಂದೆಡೆ ಚಿಕ್ಕಬಳ್ಳಾಪುರದಲ್ಲಿ ಮಹಿಳಾ ಮತದಾರರಿಗೆ ಶಾಸಕ ಸುಧಾಕರ್, ಸಂಕ್ರಾಂತಿ ಸುಗ್ಗಿ ನೆಪದಲ್ಲಿ ಸೀರೆಗಳನ್ನು  ಹಂಚುತ್ತಿದ್ದಾರೆ. ಆದರೆ ಸೀರೆಗಳನ್ನು ‌ಪಡೆದ ವ್ಯಕ್ತಿಯೋರ್ವ ತೆಗೆದುಕೊಂಡ ಸೀರೆಗಳಿಗೆ ಬೆಂಕಿ ‌ಹಚ್ಚಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ಅಲ್ಲದೇ, ಈ ವಿಡಿಯೋವನ್ನು  ಸಾಮಾಜಿಕ ಜಾಲತಾಣಗಳಲ್ಲಿ  ಹರಿದುಬಿಟ್ಟಿದ್ದಾರೆ. ನಮಗೆ ಸೀರೆ‌ಬೇಡ, ಅಭಿವೃದ್ಧಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ