ಜಲ್ಲಿಕಟ್ಟು'ಗೆ ಸುಗ್ರೀವಾಜ್ಞೆ: ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Published : Jan 22, 2017, 11:26 AM ISTUpdated : Apr 11, 2018, 01:06 PM IST
ಜಲ್ಲಿಕಟ್ಟು'ಗೆ ಸುಗ್ರೀವಾಜ್ಞೆ: ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಸೇರಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಿಜೆಪಿಯ 17 ಸಂಸದರ ಭಾವಚಿತ್ರಗಳಿಗೆ ಅಭಿನಂದಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯ್ತು. ಕಾವೇರಿ ವಿಚಾರದಲ್ಲಿ ಕರ್ನಾಟಕ ಕ್ಕೆ ಅನ್ಯಾಯವಾದರೂ ಆ ಬಗ್ಗೆ ಮನವಿ ಆಲಿಸಲು ಪ್ರಧಾನಿಯವರಿಗೆ ಪುರುಸೊತ್ತಿಲ್ಲ.

ಮೈಸೂರು(ಜ.22): ಜಲ್ಲಿಕಟ್ಟು ಪರವಾಗಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದನ್ನು ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಪ್ರಧಾನಿ ನರೇಂದ್ರ ಮೋದಿ ಸೇರಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಿಜೆಪಿಯ 17 ಸಂಸದರ ಭಾವಚಿತ್ರಗಳಿಗೆ ಅಭಿನಂದಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯ್ತು. ಕಾವೇರಿ ವಿಚಾರದಲ್ಲಿ ಕರ್ನಾಟಕ ಕ್ಕೆ ಅನ್ಯಾಯವಾದರೂ ಆ ಬಗ್ಗೆ ಮನವಿ ಆಲಿಸಲು ಪ್ರಧಾನಿಯವರಿಗೆ ಪುರುಸೊತ್ತಿಲ್ಲ. ಇತ್ತ ಪ್ರಧಾನಿಯನ್ನ ಪ್ರಶ್ನಿಸಲು ರಾಜ್ಯದ ಸಂಸದರಿಗೆ ಧೈರ್ಯವಿಲ್ಲವೇ ಅಂತಾ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ರು. ಜಲ್ಲಿಕಟ್ಟು ಮೋಜಿನ ಕ್ರೀಡೆಗೆ ಅವಕಾಶ ಕೊಟ್ಟ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಅಂತಾ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ