
ನವದೆಹಲಿ (ಅ.12): ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ದಿನವನ್ನು ನಿಗದಿಪಡಿಸಿದ ಚುನಾವಣಾ ಆಯೋಗ ಇನ್ನೂ ಗುಜರಾತ್ ಚುನಾವಣಾ ದಿನಾಂಕವನ್ನು ನಿಗದಿಪಡಿಸದೇ ಇದ್ದುದ್ದಕ್ಕೆ ಕಾಂಗ್ರೆಸ್ ಟೀಕಿಸಿದೆ. ಗುಜರಾತ್ ಚುನಾವಣೆಯನ್ನು ವಿಳಂಬ ಮಾಡುವಂತೆ ಮೋದಿ ಸರ್ಕಾರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ದಿನಾಂಕವನ್ನು ಇಂದು ನಿಗದಿಪಡಿಸುವುದಾಗಿ ಚುನಾವಣಾ ಆಯೋಗ ತಿಳಿಸಿತ್ತು. ಆದರೆ ಹಿಮಾಚಲ ಪ್ರದೇಶವೊಂದರದ್ದೇ ಘೋಷಣೆ ಮಾಡಿದೆ. ಗುಜರಾತ್ ಚುನಾವಣಾ ದಿನಾಂಕವನ್ನು ಪ್ರತ್ಯೇಕವಾಗಿ ಘೋಷಿಸುವುದಾಗಿ ಹೇಳಿದೆ. ಡಿ. 18 ರೊಳಗೆ ನಡೆಸುವ ಸಾಧ್ಯತೆಯಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎ ಕೆ ಜೋತಿ ಹೇಳಿದ್ದಾರೆ. ಚುನಾವಣಾ ಆಯೋಗದ ನಡೆಯನ್ನು ಕಾಂಗ್ರೆಸ್ ಟೀಕಿಸಿದೆ. ಮೋದಿ ಸರ್ಕಾರ ಪಿತೂರಿ ಮಾಡಿದೆ. ಗುಜರಾತ್ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಎಸ್ ಸರ್ಜೇವಾಲಾ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.