ಎಂಥ ಸಂದರ್ಭದಲ್ಲೂ ಕಾಂಗ್ರೆಸ್ ನಿಮ್ಮ ಹಿಂದಿರುತ್ತದೆ; ಡಿಕೆಶಿಗೆ ರಾಹುಲ್ ಬೆಂಬಲ

Published : Aug 12, 2017, 10:07 PM ISTUpdated : Apr 11, 2018, 12:47 PM IST
ಎಂಥ ಸಂದರ್ಭದಲ್ಲೂ ಕಾಂಗ್ರೆಸ್ ನಿಮ್ಮ ಹಿಂದಿರುತ್ತದೆ; ಡಿಕೆಶಿಗೆ ರಾಹುಲ್ ಬೆಂಬಲ

ಸಾರಾಂಶ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನ ಸಮಾವೇಶದ ಬಳಿಕ ಬಳ್ಳಾರಿ ಸಮೀಪದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳುವಾಗ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕರೆದೊಯ್ದು ಸುಮಾರು ಅರ್ಧಗಂಟೆಗಳ ಕಾಲ ಹೆಲಿಕಾಪ್ಟರ್‌ನಲ್ಲೇ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು (ಆ.12): ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನ ಸಮಾವೇಶದ ಬಳಿಕ ಬಳ್ಳಾರಿ ಸಮೀಪದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳುವಾಗ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕರೆದೊಯ್ದು ಸುಮಾರು ಅರ್ಧಗಂಟೆಗಳ ಕಾಲ ಹೆಲಿಕಾಪ್ಟರ್‌ನಲ್ಲೇ ಮಾತುಕತೆ ನಡೆಸಿದ್ದಾರೆ.

ಶನಿವಾರ ಸಂಜೆ 5 ಗಂಟೆಗೆ ರಾಯಚೂರಿನ ಕಾಂಗ್ರೆಸ್ ಸಮಾವೇಶದ ಬಳಿಕ ಹೆಲಿಕಾಪ್ಟರ್‌ನಲ್ಲಿ ರಾಹುಲ್ ತೆರಳಬೇಕಿತ್ತು. ಈ ವೇಳೆ ಸಮಾವೇಶದ ಸ್ಥಳದಿಂದ ಹೆಲಿಪ್ಯಾಡ್‌ಗೆ ತೆರಳಿದರು. ಹೆಲಿಪ್ಯಾಡ್‌ನಲ್ಲಿ ರಾಹುಲ್ ಅವರನ್ನು ಬೀಳ್ಕೊಡಲು ಬಂದಿದ್ದ ಸಚಿವ ಶಿವಕುಮಾರ್ ಅವರ ಕೈ ಹಿಡಿದ ರಾಹುಲ್, ‘ಆಪ್ ಭೀ ಸಾಥ್ ಚಲೋ, ಬಾತ್ ಕರತೇ ಹೈ’ ಎಂದು ಹೆಲಿಕಾಪ್ಟರ್ ಏರುವಂತೆ ಸೂಚಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತ್ರ ರಾಹುಲ್ ಜೊತೆ ಹೆಲಿಕಾಪ್ಟರ್‌ನಲ್ಲಿ ತೆರಳಬೇಕಿತ್ತು. ಆದರೆ ಸ್ವತಃ ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಚಿವ ಡಿ.ಕೆ.ಶಿವಕುಮಾರ್ ಕೂಡ ಹೆಲಿಕಾಪ್ಟರ್ ಏರಬೇಕಾಯಿತು. 

ಈ ಮಧ್ಯೆ ರಾಯಚೂರಿನಿಂದ ಜಿಂದಾಲ್‌ವರೆಗಿನ ಪ್ರಯಾಣದ ವೇಳೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಅವರು ಸಚಿವ ಶಿವಕುಮಾರ್ ಅವರೊಂದಿಗೆ ಇತ್ತೀಚಿನ ಆದಾಯ ತೆರಿಗೆ ದಾಳಿ ಹಾಗೂ ನಂತರದ ವಿಚಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಎಂತಹುದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ತಮ್ಮ ಬೆಂಬಲಕ್ಕೆ ಇರುತ್ತದೆ ಎಂದು ಆತ್ಮಸ್ಥೈರ್ಯ ತುಂಬಿದರು. ಜೊತೆಗೆ ಗುಜರಾತ್ ಶಾಸಕರನ್ನು ಸಚಿವ ಶಿವಕುಮಾರ್ ಬೆಂಗಳೂರಿಗೆ ಕರೆತಂದು ನಿಭಾಯಿಸಿದ ರೀತಿಗೂ ರಾಹುಲ್ ಪ್ರಶಂಸೆ ವ್ಯಕ್ತಪಡಿಸಿದರು ಎನ್ನಲಾಗಿದೆ. 

ಬಳಿಕ ಸಂಜೆ 5.45 ಕ್ಕೆ ಬಳ್ಳಾರಿ ಸಮೀಪದ ತೋರಣಗಲ್ಲಿನ ಜಿಂದಾಲ್ ನಿಲ್ದಾಣಕ್ಕೆ ತೆರಳಿದ ರಾಹುಲ್ ಗಾಂಧಿ ನಂತರ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಮತ್ತಿತರರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದರೆ, ಸಚಿವ ಡಿ.ಕೆ.ಶಿವಕುಮಾರ್ ಮಾತ್ರ ರಸ್ತೆ ಮೂಲಕ ಹೈದರಾಬಾದ್‌ಗೆ ತೆರಳಿ ಅಲ್ಲಿಂದ ಬೇರೊಂದು ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ