
ರಾಯಪುರ್(ಡಿ.16): ಛತ್ತೀಸ್ಗಡ್ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಘೆಲ್ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷ ಇಂದು ಆಯ್ಕೆ ಮಾಡಿದೆ.
ರಾಯಪುರ್ದಲ್ಲಿ ಇಂದು ನಡೆದ ಶಾಸಕಾಂಗ ಸಭೆಯ ಬಳಿಕ, ಬಾಘೆಲ್ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಾಯಿತು.
ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದ ಭೂಪೇಶ್ ಬಾಘೆಲ್, ಟಿಎಸ್ ಸಿಂಗ್ ಡಿಯೊ, ತಮರಾಧ್ವಾಜ್ ಸಾಹು ಹಾಗೂ ಚರಣ್ ದಾಸ್ ಮೆಹಂತ ಅವರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ನಿನ್ನೆ ಚರ್ಚೆ ನಡೆಸಿದ್ದರು.
ರಾಜಸ್ತಾನ , ಮಧ್ಯಪ್ರದೇಶ ಹಾಗೂ ಛತ್ತೀಸ್ಗಡ್ ನೂತನ ಮುಖ್ಯಮಂತ್ರಿಗಳು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಭಾರಿ ಶಕ್ತಿ ಪ್ರದರ್ಶಿಸುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.