
ಬೆಂಗಳೂರು, [ಏ.27]: ಇದೆ ಮೇ 19 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಉಮೇಶ್ ರಾಜೀನಾಮೆಯಿಂದ ತೆರವಾದ ಕಲಬುರಗಿ ಜಿಲ್ಲೆ ಚಿಂಚೋಳಿ ಹಾಗೂ ಸಿ.ಎಸ್ .ಶಿವಳ್ಳಿ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಈ ಉಪಚುನಾವಣೆಗೂ ಮೈತ್ರಿ ಮುಂದುವರಿಸಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯ ಗೆಲುವಿಗಾಗಿ ರಣತಂತ್ರವನ್ನ ರೂಪಿಸಿದ್ದಾರೆ. ಅದರಂತೆ ಇಂದು [ಶನಿವಾರ] ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು.
ಚಿಂಚೋಳಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಅಂತಿಮ
ಈ ಸಭೆಯಲ್ಲಿ ಎರಡೂ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯನ್ನ ನೇಮಕ ಮಾಡಲಾಗಿದೆ. ಕುಂದಗೋಳ ಕ್ಷೇತ್ರಕ್ಕೆ ಸಚಿವ ಡಿ.ಕೆ.ಶಿವಕುಮಾರ್, ಚಿಂಚೋಳಿಗೆ ಡಿಸಿಎಂ ಡಾ.ಜಿ ಪರಮೇಶ್ವರ್ ಅವರನ್ನ ಉಸ್ತುವಾರಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ಜೊತೆಗೆ ಬೀದರ್, ಕಲಬುರಗಿ, ಬಳ್ಳಾರಿ ಭಾಗದ ಸಚಿವರೆಲ್ಲರಿಗೂ ಉಪಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನ ನೀಡಲಾಗಿದ್ದು, ಉಪಚುನಾವಣೆ ಮುಗಿಯುವವರೆಗೂ ಕ್ಷೇತ್ರಗಳಲ್ಲೇ ಉಳಿದುಕೊಂಡು ಗೆಲುವಿಗಾಗಿ ತಂತ್ರ ರೂಪಿಸುವಂತೆ ಖಡಕ್ ಸೂಚನೆ ನೀಡಲಾಗಿದೆ.
ಕುಂದಗೋಳ ಕ್ಷೇತ್ರದಿಂದ ಕುಸುಮಾ ಶಿವಳ್ಳಿ ಸ್ಪರ್ಧೆ ಖಚಿತವಾಗಿದ್ದು, ಚಿಂಚೋಳಿ ಕ್ಷೇತ್ರದಿಂದ ಶುಭಾಷ್ ರಾಥೋಡ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.