ಕಾಂಗ್ರೆಸ್ ಪಕ್ಷದ ದೊಡ್ಡ ಸಮಸ್ಯೆಯೆಂದರೆ ಅದು ರಾಹುಲ್ ಗಾಂಧಿ: ರವಿಶಂಕರ್ ಪ್ರಸಾದ್

Published : Mar 18, 2017, 12:12 PM ISTUpdated : Apr 11, 2018, 12:46 PM IST
ಕಾಂಗ್ರೆಸ್ ಪಕ್ಷದ ದೊಡ್ಡ ಸಮಸ್ಯೆಯೆಂದರೆ ಅದು ರಾಹುಲ್ ಗಾಂಧಿ: ರವಿಶಂಕರ್ ಪ್ರಸಾದ್

ಸಾರಾಂಶ

ಕಾಂಗ್ರೆಸ್ ಸಮರ್ಥ ಪ್ರತಿಪಕ್ಷವಾಗಿ ಹೊರಹೊಮ್ಮಬೇಕೆಂದು ನಾವು ಕೂಡಾ ನಿರೀಕ್ಷಿಸುತ್ತಿದ್ದೇವೆ, ಆದರೆ ಅವರನ್ನು ಮಾರ್ಗದರ್ಶನ ಮಾಡಬೇಕಾದುದು ಬಿಜೆಪಿಯ ಜವಾಬ್ದಾರಿಯಲ್ಲ: ರವಿಶಂಕರ್ ಪ್ರಸಾದ್

ನವದೆಹಲಿ (ಮಾ.18): ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಕಾಂಗ್ರೆಸ್’ಗೆ ರಾಹುಲ್ ಗಾಂಧಿಯೇ ದೊಡ್ಡ ಸಮಸ್ಯೆಯೆಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಇರುವ ದೊಡ್ಡ ಸಮಸ್ಯೆಯೆಂದರೆ ಅದು ರಾಹುಲ್ ಗಾಂಧಿ, ಕಾಂಗ್ರೆಸ್ ಸಮರ್ಥ ಪ್ರತಿಪಕ್ಷವಾಗಿ ಹೊರಹೊಮ್ಮಬೇಕೆಂದು ನಾವು ಕೂಡಾ ನಿರೀಕ್ಷಿಸುತ್ತಿದ್ದೇವೆ, ಆದರೆ ಅವರನ್ನು ಮಾರ್ಗದರ್ಶನ ಮಾಡಬೇಕಾದುದು ಬಿಜೆಪಿಯ ಜವಾಬ್ದಾರಿಯಲ್ಲ, ಅವರು ಖುದ್ದಾಗಿ ಬದಲಾಗಬೇಕು ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿರುವಂತೆ ಮುಂದಿನ ವರ್ಷ ಗುಜರಾತ್ ಚುನಾವಣೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರವಿಶಂಕರ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ
ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ