
ಮೈಸೂರು (ಮಾ.27): ನಂಜನಗೂಡು, ಗುಂಡ್ಲುಪೇಟೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ನಂಜನಗೂಡಲ್ಲಿ ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಭರ್ಜರಿ ಪ್ರಚಾರವನ್ನು ಮುಂದುವರೆಸಿವೆ.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಪರ ಸಂಸದೆ ಶೋಭಾ ಕರಂದ್ಲಾಜೆ ಇಂದು ಪ್ರಚಾರ ನಡೆಸಿದ್ದಾರೆ.
ನಂಜನಗೂಡಲ್ಲಿ ಕಾಂಗ್ರೆಸ್ ಪ್ರಚಾರಕ್ಕೇನು ಕಡಿಮೆ ಇಲ್ಲ. ಕಳಲೆ ಗ್ರಾಮದಲ್ಲಿ ಕಾಂಗ್ರೆಸ್ ಪರ ಸಚಿವ ಮಹದೇವಪ್ಪ ಪ್ರಚಾರ ನಡೆಸಿದರು. ಈ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಕಳಲೆ ಕೇಶವ ಮೂರ್ತಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಒಕ್ಕಲಿಗರ ಪಕ್ಷ ಎಂಬ ಭಾವನೆ ಬಂದಿದೆ. ನಾನು ಕಾಂಗ್ರೆಸ್ ಸೇರಿದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆ ಒಟ್ಟಿಗೆ ಮಾಡಿ ವಿಶ್ವಾಸಕ್ಕೆ ಪಡೆದಿದ್ದೇನೆ. ನಮ್ಮ ನಾಯಕರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ನಮ್ಮೆಲ್ಲರ ನೆಚ್ಚಿನ ನಾಯಕರಾದ ಹೆಚ್.ಡಿ.ಕುಮಾರಣ್ಣ ಇರುವಾಗ ಒಕ್ಕಲಿಗ ನಾಯಕರು ಬೆಂಬಲಿಸಿತ್ತಾರೆ ಎಂಬ ವಿಶ್ವಾಸ ಇದೆ. ಇವತ್ತೂ ಕೂಡ ಎಲ್ಲಾ ಒಕ್ಕಲಿಗರು ಕಾಂಗ್ರೆಸ್’ಗೆ ಮತ ನೀಡುತ್ತಾರೆಂಬ ವಿಶ್ವಾಸ ಇದೆ, ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.