ಕೈ ಕಸರತ್ತು ಅಂತ್ಯ : 17 ಜನರಿಗೆ ಮೊದಲ ಹಂತದಲ್ಲಿ ಮಂತ್ರಿಗಿರಿ

Published : Jun 05, 2018, 02:16 PM IST
ಕೈ ಕಸರತ್ತು ಅಂತ್ಯ : 17 ಜನರಿಗೆ ಮೊದಲ ಹಂತದಲ್ಲಿ ಮಂತ್ರಿಗಿರಿ

ಸಾರಾಂಶ

ಕರ್ನಾಟಕದಲ್ಲಿ ಸಂಪುಟ ರಚನೆಯ ಸರ್ಕಸ್ ಮುಂದುವರಿದಿದೆ. ಸಚಿವ ಸ್ಥಾನಾಕಾಂಕ್ಷಿಗಳ ಪಟ್ಟಿಯೊಂದಿಗೆ ಕಾಂಗ್ರೆಸ್ ಮುಖಂಡರು ದಿಲ್ಲಿಗೆ ತೆರಳಿದ್ದು, 2 ಹಂತದಲ್ಲಿ ಸಂಪುಟ ವಿಸ್ತರಣೆ  ಮಾಡಲು ಈ ವೇಳೆ ತೀರ್ಮಾನ ಮಾಡಿದ್ದಾರೆ.   

ನವದೆಹಲಿ : ಕರ್ನಾಟಕದಲ್ಲಿ ಸಂಪುಟ ರಚನೆಯ ಸರ್ಕಸ್ ಮುಂದುವರಿದಿದೆ. ಸಚಿವ ಸ್ಥಾನಾಕಾಂಕ್ಷಿಗಳ ಪಟ್ಟಿಯೊಂದಿಗೆ ಕಾಂಗ್ರೆಸ್ ಮುಖಂಡರು ದಿಲ್ಲಿಗೆ ತೆರಳಿದ್ದು, 2 ಹಂತದಲ್ಲಿ ಸಂಪುಟ ವಿಸ್ತರಣೆ  ಮಾಡಲು ಈ ವೇಳೆ ತೀರ್ಮಾನ ಮಾಡಿದ್ದಾರೆ. 

ಈ ಮೂಲಕ ಪಕ್ಷದೊಳಗಿನ ಅಸಮಾಧಾನ ನಿಯಂತ್ರಣ ಮಾಡಲು ಈ ಪ್ಲಾನ್ ಮಾಡಲಾಗಿದೆ. ಮೊದಲ ಹಂತದಲ್ಲಿ 17 ಸ್ಥಾನಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಿದ್ದು, ಎರಡನೆ ಹಂತದಲ್ಲಿ ಇನ್ನುಳಿದ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ. 

ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೆ ಮಾತ್ರವೇ 2 ಹಂತದಲ್ಲಿ ಸಂಪುಟ ರಚನೆ ಮಾಡಲಾಗುತ್ತದೆ. ಅದರಂತೆ ಕಾಂಗ್ರೆಸ್ ಹೈ ಕಮಾಂಡ್ ಕೂಡ ರಾಜ್ಯ ನಾಯಕರು ಸಿದ್ಧಪಡಿಸಿರುವ ಸೂತ್ರಕ್ಕೆ ಒಪ್ಪಿಗೆ ನೀಡುವ ಸಾಧ್ಯತೆಗಳು ಹೆಚ್ಚಿದೆ. 
 
21 ಸ್ಥಾನಗಳ ಪೈಕಿ 17 ಸ್ಥಾನ ಮಾತ್ರ ಮೊದಲ ಹಂತದಲ್ಲಿ ಭರ್ತಿಯಾಗಲಿದ್ದು, ಇಬ್ಬರು ಪಕ್ಷೇತರರಿಗೂ ಮೊದಲ ಹಂತದಲ್ಲೇ ಸಚಿವ ಸ್ಥಾನ ನೀಡಲಾಗುತ್ತದೆ.  ನಾಳೆ ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಕಾರ್ಯಕ್ರಮ ಜರುಗಲಿದೆ. ಇಂದು ರಾತ್ರಿ ಸಚಿವರ ಪಟ್ಟಿಯನ್ನು  ಹೈಕಮಾಂಡ್ ಸಿದ್ಧಪಡಿಸಲಿದ್ದು,  ಬಹುತೇಕ ಹಿರಿಯರಿಗೆ ಈ ಬಾರಿ ಸಂಪುಟದಲ್ಲಿ ಸ್ಥಾನ ದೊರೆಯುವುದು ಅನುಮಾನವಾಗಿದೆ. 

ಆಪ್ತರಿಗೆ ಸ್ಥಾನ  ಕೊಡಿಸಲು ಇದೇ ವೇಳೆ ಪ್ರಮುಖ ನಾಯಕರು ಕಸರತ್ತು ಮಾಡುತ್ತಿದ್ದು, ಸಿದ್ಧರಾಮಯ್ಯ, ಖರ್ಗೆ, ಪರಮೇಶ್ವರ್, ಶಿವಕುಮಾರ್ ಮೂಲಕ ಆಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ