ಗಣಿ ನೆಲದಲ್ಲಿ ಬಾಡಿದ ಕಮಲ; ’ಕೈ’ ಹಿಡಿದ ಮತದಾರ

Nov 6, 2018, 1:24 PM IST

ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶಾಂತಾ ಎದುರು ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶ್ರೀರಾಮುಲು ಭದ್ರಕೋಟೆಯಾಗಿರುವ ಬಳ್ಳಾರಿಯಲ್ಲಿ ಡಿಕೆಶಿ ರಾಜಕೀಯ ತಂತ್ರದಿಂದಾಗಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಗೆಲುವಿನ ಬಗ್ಗೆ ಡಿ ಕೆ ಶಿವಕುಮಾರ್ ಪ್ರೆಸ್ ಮೀಟ್ ನಡೆಸಿ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.