ಶಿವಮೊಗ್ಗದಲ್ಲಿ ಟಿಕೆಟ್ ಕೊಡ್ತೀವಿ ಅಂದ್ರೂ ನಿಲ್ಲೋಕೆ ಅಭ್ಯರ್ಥಿಗಳೇ ಇಲ್ಲ!

Published : Oct 11, 2018, 08:59 AM ISTUpdated : Oct 11, 2018, 09:03 AM IST
ಶಿವಮೊಗ್ಗದಲ್ಲಿ ಟಿಕೆಟ್ ಕೊಡ್ತೀವಿ ಅಂದ್ರೂ ನಿಲ್ಲೋಕೆ ಅಭ್ಯರ್ಥಿಗಳೇ ಇಲ್ಲ!

ಸಾರಾಂಶ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೂ ಬೇಡ | ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಹಿಂದೇಟು | ಸುಂದರೇಶ್‌ಗೆ ಟಿಕೆಟ್ ಕೊಡುವ ಸಾಧ್ಯತೆ 

ಶಿವಮೊಗ್ಗ (ಅ. 11):  ಖರ್ಚಿನ ಬಾಬ್ತು ಆಗಿರುವ ಲೋಕಸಭಾ ಉಪ ಚುನಾವಣೆಯಲ್ಲಿ ಟಿಕೆಟ್ ನೀಡುತ್ತೇನೆ ಎಂದರೂ ಸ್ಪರ್ಧೆಗೆ ಮುಂದಾಗುವವರೇ ಇಲ್ಲವಾಗಿರುವುದು ಕಾಂಗ್ರೆಸ್‌ಗೆ ತಲೆ ನೋವಾಗಿದೆ.

ಕಾಂಗ್ರೆಸ್ ನಾಯಕರು ಈ ಲೋಕಸಭಾ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಜಿಲ್ಲಾ ನಾಯಕರೊಂದಿಗೆ ಚರ್ಚೆ ನಡೆಸಿದಾಗ ಗೆಲ್ಲುವ ಅಥವಾ ಉತ್ತಮ ಸ್ಪರ್ಧೆ ನೀಡುವ ಸಾಮರ್ಥ್ಯವಿರುವ ಹಲವು ಹೆಸರುಗಳು ಪ್ರಸ್ತಾಪವಾಯಿತು. 

ಮುಖ್ಯವಾಗಿ ಕಿಮ್ಮನೆ ರತ್ನಾಕರ್, ಕಾಗೋಡು ತಿಮ್ಮಪ್ಪ, ಸುಂದರೇಶ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಪ್ರಸ್ತಾಪವಾಗಿತ್ತು. ಅದರಂತೆ ಕಾಂಗ್ರೆಸ್ ನಾಯಕತ್ವವು ಈ ನಾಲ್ಕು ಮಂದಿಯನ್ನು ಪ್ರತ್ಯೇಕವಾಗಿ ಕರೆದು ಚರ್ಚೆ ನಡೆಸಿದ್ದು, ಸ್ಪರ್ಧೆಗೆ ಮುಂದಾಗುವಂತೆ ತಿಳಿಸಿದೆ.

ಆದರೆ, ಕಡಿಮೆಯೆಂದರೂ 10 ಕೋಟಿ ರು. ವೆಚ್ಚವಾಗುವ ಹಿನ್ನೆಲೆಯಲ್ಲಿ ಬೇಳೂರು ಗೋಪಾಲಕೃಷ್ಣ, ಕಿಮ್ಮನೆ ರತ್ನಾಕರ ಹಾಗೂ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧೆಗೆ ಹಿಂಜರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಸುಂದರೇಶ್ ಅವರು ಮಾತ್ರ ಸ್ಪರ್ಧೆಗೆ ಆಸಕ್ತಿ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಂದರೇಶ್ ಅವರಿಗೆ ಪಕ್ಷ ಟಿಕೆಟ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!