
ನವದೆಹಲಿ: ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾಪ ಕುರಿತಂತೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ನಡುವೆ, ಲೋಕಸಭೆಯನ್ನು ವಿಸರ್ಜಿಸಿ ವರ್ಷಾಂತ್ಯದಲ್ಲಿ ನಡೆಯುವ ನಾಲ್ಕು ರಾಜ್ಯಗಳ ಚುನಾವಣೆಯೊಂದಿಗೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿಗೆ, ಕಾಂಗ್ರೆಸ್ ಸವಾಲೊಡ್ಡಿದೆ.
ಇದೇ ವೇಳೆ ವಿಧಾನಸಭಾ ಚುನಾವಣೆಗಳನ್ನು ಮುಂದೂಡಿ ಅಥವಾ ಹಿಂದೂಡಿ ಅವುಗಳನ್ನು 2019ರ ಲೋಕಸಭಾ ಚುನಾವಣೆಯೊಂದಿಗೆ ನಡೆಸುವುದು ಸಂವಿಧಾನ ಅಥವಾ ಕಾನೂನಿನಡಿ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ.
‘ಏಕಕಾಲದ ಚುನಾವಣೆ ನಡೆಸುವುದಕ್ಕೆ ಒಂದೇ ಒಂದು ಮಾರ್ಗವಿದೆ. ಪ್ರಧಾನಿಯವರು ಲೋಕಸಭೆಯನ್ನು ವಿಸರ್ಜಿಸಬೇಕು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳ ಜೊತೆ ಲೋಕಸಭಾ ಚುನಾವಣೆಯನ್ನೂ ನಡೆಸಬಹುದು’ ಎಂದು ಅವರು ಹೇಳಿದ್ದಾರೆ. ಈ ನಾಲ್ಕು ರಾಜ್ಯಗಳು ಸೇರಿದಂತೆ 11 ವಿಧಾನಸಭೆಗಳು ಮತ್ತು ಲೋಕಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರತಿಪಾದಿಸಿದ ಬೆನ್ನಲ್ಲೇ ಗೆಹ್ಲೋಟ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.