ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗ ಭೇಟಿ ಮುಂದೂಡಿಕೆ

Published : Feb 20, 2017, 11:15 AM ISTUpdated : Apr 11, 2018, 12:36 PM IST
ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗ ಭೇಟಿ ಮುಂದೂಡಿಕೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ್ಯಾಲಿಯಲ್ಲಿ ‘ದೀಪಾವಳಿ-ರಂಜಾನ್’ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಿಯೋಗವು ಚುನಾವಣಾ ಆಯೋಗವನ್ನು ಇಂದು ಸಂಜೆ 5 .30 ಭೇಟಿ ಮಾಡುವುದನ್ನು ಮುಂದೂಡಲಾಗಿದೆ. ಮುಂದಿನ ನೋಟಿಸ್ ಬರುವವರೆಗೆ ಸಮಯ ನಿಗದಿಯಾಗಿಲ್ಲ.

ನವದೆಹಲಿ (ಫೆ.20): ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ್ಯಾಲಿಯಲ್ಲಿ ‘ದೀಪಾವಳಿ-ರಂಜಾನ್’ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಿಯೋಗವು ಚುನಾವಣಾ ಆಯೋಗವನ್ನು ಇಂದು ಸಂಜೆ 5 .30 ಭೇಟಿ ಮಾಡುವುದನ್ನು ಮುಂದೂಡಲಾಗಿದೆ. ಮುಂದಿನ ನೋಟಿಸ್ ಬರುವವರೆಗೆ ಸಮಯ ನಿಗದಿಯಾಗಿಲ್ಲ.

ಕೇಂದ್ರ ಸಚಿವ ಕಪಿಲ್ ಸಿಬಲ್, ರಾಜ್ಯಸಭಾ ಪ್ರತಿಪಕ್ಷ ನಾಯಕ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ಸತ್ಯವ್ರತ್ ಚತುರ್ವೇದಿ, ಮಾನವ ಹಕ್ಕು ಆಯೋಗದ ಕೆ.ಸಿ ಮಿತ್ತಲ್ ರನ್ನು ಕಾಂಗ್ರೆಸ್ ನಿಯೋಗ ಒಳಗೊಂಡಿದೆ.

ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದೇವೆ. ಬಿಜೆಪಿ ಚಿಹ್ನೆಯನ್ನು ಅಮಾನ್ಯಗೊಳಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೇವೆ. ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಶಕ್ತಿಯನ್ನು ಪ್ರದರ್ಶಿಸಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸಲಿದೆ ಎನ್ನುವ ನಂಬಿಕೆ ನಮಗಿದೆ. ಪಕ್ಷದ ಚಿಹ್ನೆ ಕಮಲವನ್ನು ಅಮಾನ್ಯಗೊಳಿಸಬೇಕು ಎಂದು ಕೆ.ಸಿ ಮಿತ್ತಲ್ ಹೇಳಿದ್ದಾರೆ.

ರಂಜಾನ್ ನಲ್ಲಿ ವಿದ್ಯುತ್ ಇದ್ದರೆ ದೀಪಾವಳಿಯಲ್ಲೂ ಇರಬೇಕು. ಭೇದ-ಭಾವ ಇರಬಾರದು. ಗ್ರಾಮದಲ್ಲಿ ಕಬರಸ್ಥಾನ ಮಾಡಿದರೆ ಸ್ಮಶಾನವನ್ನೂ ಮಾಡಬೇಕು ಎಂದು ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಹೇಳಿಕೆ ನೀಡ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ
ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ: ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ