
ಪಣಜಿ : ‘ರಫೇಲ್ ವ್ಯವಹಾರದ ರಹಸ್ಯ ಕಡತ ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಅವರ ಮನೆಯ ಬೆಡ್ರೂಮಲ್ಲಿವೆ’ ಎಂಬ ಗೋವಾ ಸಚಿವ ವಿಶ್ವಜಿತ್ ರಾಣೆ ಧ್ವನಿಯುಳ್ಳ ಆಡಿಯೋ ಟೇಪ್ ಬಿಡುಗಡೆಯಾದ ಬಗ್ಗೆ ಪರ್ರಿಕರ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಗೋವಾ ಕಾಂಗ್ರೆಸ್, ‘ಪರ್ರಿಕರ್ ಅವರನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಅವರ ಮನೆಯನ್ನು ಶೋಧಿಸಬೇಕು’ ಎಂದು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋವಾ ಕಾಂಗ್ರೆಸ್ ವಕ್ತಾರ ಸಿದ್ಧಾಂತ ಬುಯಾವೋ ಅವರು, ‘ರಫೆಲ್ ಡೀಲ್ ರಹಸ್ಯವು ಪರ್ರಿಕರ್ ಮನೆಯ ಶಯನಗೃಹದಲ್ಲಿ ಇದೆ.
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ಸಿಬಿಐಗೆ ಈ ಬಗ್ಗೆ ಶೋಧ ಕಾರ್ಯ ನಡೆಸಬೇಕು ಎಂದು ನಾವು ಮನವಿ ಮಾಡುತ್ತೇವೆ. ಆಗ ಸತ್ಯ ಹೊರಬರಲಿದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.