ನೋಟು ನಿಷೇಧ ಮಾಹಿತಿ ಸೋರಿಕೆ ಬಗ್ಗೆ ತನಿಖೆಯಾಗಲಿ: ಕಾಂಗ್ರೆಸ್

Published : Nov 12, 2016, 01:55 AM ISTUpdated : Apr 11, 2018, 01:06 PM IST
ನೋಟು ನಿಷೇಧ ಮಾಹಿತಿ ಸೋರಿಕೆ ಬಗ್ಗೆ ತನಿಖೆಯಾಗಲಿ: ಕಾಂಗ್ರೆಸ್

ಸಾರಾಂಶ

ನೋಟು ನಿಷೇಧ ಘೋಷಣೆಯಾಗುವ ಮುಂಚೆ ಬಿಜೆಪಿ ಕಾರ್ಯಕರ್ತರು ಕೋಟಿಗಟ್ಟಲೇ ಹಣವನ್ನು ಜಮಾ ಮಾಡಿರುವುದು ಕಾಕತಾಳಿಯವೆನ್ನುವ ಹಾಗಿಲ್ಲ. ಈ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಕಾಂಗ್ರೆಸ್ ನಾಯಕಿ ಶರ್ಮಿಷ್ಠಾ ಮುಖರ್ಜಿ ಹೇಳಿದ್ದಾರೆ.

ನವದೆಹಲಿ (ನ.12): ಕೇಂದ್ರ ಸರ್ಕಾರ ತೆಗೆದುಕೊಳ್ಳಲಿರುವ ನೋಟು ನಿಷೇಧ ಕ್ರಮವು ಬಿಜೆಪಿ ವಲಯದಲ್ಲಿ ಮುಂಚಿತವಾಗಿ ತಿಳಿದಿತ್ತು ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ನೋಟು ನಿಷೇಧವಾಗಲಿದೆ ಎಂದು ಬಿಜೆಪಿ ಕಾರ್ಯಕರ್ತರಿಗೆ ಮೊದಲೇ ತಿಳಿದಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ನೋಟು ನಿಷೇಧ ಘೋಷಣೆಯಾಗುವ ಮುಂಚೆ ಬಿಜೆಪಿ ಕಾರ್ಯಕರ್ತರು ಕೋಟಿಗಟ್ಟಲೇ ಹಣವನ್ನು ಜಮಾ ಮಾಡಿರುವುದು ಕಾಕತಾಳಿಯವೆನ್ನುವ ಹಾಗಿಲ್ಲ. ಈ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಕಾಂಗ್ರೆಸ್ ನಾಯಕಿ ಶರ್ಮಿಷ್ಠಾ ಮುಖರ್ಜಿ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ನೋಟು ನಿಷೇಧ ಕ್ರಮದಲ್ಲಿ ಹಗರಣವಾಗಿದೆ ಎಂದು ಆರೋಪಿಸಿದ್ದಾರೆ. ನೋಟು ನಿಷೇಧ ಕ್ರಮದ ಬಗ್ಗೆ ಪ್ರಧಾನಿಯವರು, ಕಪ್ಪುಹಣ ಹೊಂದಿರುವ ತಮ್ಮ ಮಿತ್ರರಿಗೆ ಮುಂಚಿತವಾಗಿ ತಿಳಿಸಿದ್ದಾರೆ ಎಂದು ಕೇಜ್ರಿವಾಲ್ ಆರೊಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌